ಬೆಂಗಳೂರು : ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಗೃಹ ಜ್ಯೋತಿ ಯೋಜನೆಯಿಂದ ಎಸ್ಕಾಂಗಳು ನಷ್ಟಕ್ಕೆ ಒಳಗಾಗುತ್ತವೆ ಎಂಬ ಮಾತುಗಳು ಕೇಳುಬರುತ್ತಿದ್ದವು. ಆದರೆ ಇದರ ಮಧ್ಯೆ ಬೆಸ್ಕಾಂ ೨೦೨೩ ಮತ್ತು೨೦೨೪ ರ ಹಣಕಾಸು ವರ್ಷದಲ್ಲಿ ೭ ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಲಾಭ ಕಂಡಿರುವುದು ಗೊತ್ತಾಗಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಬೆಸ್ಕಾಂ ನಗರಕ್ಕೆ ಮಾತ್ರವಲ್ಲದೆ ದಕ್ಷಿಣದ ಸುಮಾರು ೮ ಜಿಲ್ಲೆಗಳಿಗೂ ಕೂಡ ವಿದ್ಯುತ್ ಪೂರೈಕೆ ಮಾಡುತ್ತಿದೆ. ಕಳೆದ ೧೦ ವರ್ಷದ ಆದಾಯ ಅಂಕಿ ಅಂಶ ಬಿಡುಗಡೆಯಾಗಿದ್ದು, ಆದಾಯ ಗಮನಾರ್ಹ ರೀತಿಯಲ್ಲಿ ಹೆಚ್ಚಾಗಿರುವುದು ಕಂಡುಬಂದಿದೆ.
೨೦೧೩-೧೪ ಹಣಕಾಸು ವರ್ಷದಲ್ಲಿ ೧೧ ಸಾವಿರ ಕೋಟಿ ರೂಪಾಯಿಗಳ ಆದಾಯ ಸಂಗ್ರಹ ಮಾಡಿದ್ದ ಬೆಸ್ಕಾಂ ಬಳಿಕ ಪ್ರತಿ ವರ್ಷವೂ ಕೂಡ ಲಾಭದ ಹಳಿಯಲ್ಲಿಯೇ ಇದೆ. ತದನಂತರ ಪ್ರಮುಖವಾಗಿ ಕಳೆದ ೫ ವರ್ಷಗಳನ್ನ ಗಮನಿಸಿದರೆ ೨೦೨೦ -೨೧ ರಲ್ಲಿ ೧೯,೨೩೩ ಕೋಟಿ, ೨೦೨೧-೨೨ ರಲ್ಲಿ ೨೦,೭೧೨ ಕೋಟಿ, ಹಾಗೂ ೨೨-೨೩ ರಲ್ಲಿ ೨೪,೭೦೦ ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ. ಕಳೆದ ಹಣಕಾಸು ವರ್ಷ ಅಂದರೆ ೨೦೨೩-೨೪ ರಲ್ಲಿ ಬರೋಬ್ಬರಿ ೩೧,೩೭೮ ಕೋಟಿ ರೂಪಾಯಿಗಳ ಭರ್ಜರಿ ಆದಾಯ ಕಂಡಿದ್ದು, ಸಂತಸವನ್ನು ಬೆಸ್ಕಾಂ ವ್ಯಕ್ತಪಡಿಸಿದೆ.
ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…
ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…
ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…
ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…
ದಿನೇಶ್ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…
ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…