ರಾಜ್ಯ

೧೦ ವರ್ಷಗಳಲ್ಲಿ ಬೆಸ್ಕಾಂ ಆದಾಯ ೩ ಪಟ್ಟು ಹೆಚ್ಚಳ

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿದ ಗೃಹ ಜ್ಯೋತಿ ಯೋಜನೆಯಿಂದ ಎಸ್ಕಾಂಗಳು ನಷ್ಟಕ್ಕೆ ಒಳಗಾಗುತ್ತವೆ ಎಂಬ ಮಾತುಗಳು ಕೇಳುಬರುತ್ತಿದ್ದವು. ಆದರೆ ಇದರ ಮಧ್ಯೆ ಬೆಸ್ಕಾಂ ೨೦೨೩ ಮತ್ತು೨೦೨೪ ರ ಹಣಕಾಸು ವರ್ಷದಲ್ಲಿ ೭ ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಲಾಭ ಕಂಡಿರುವುದು ಗೊತ್ತಾಗಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಬೆಸ್ಕಾಂ ನಗರಕ್ಕೆ ಮಾತ್ರವಲ್ಲದೆ ದಕ್ಷಿಣದ ಸುಮಾರು ೮ ಜಿಲ್ಲೆಗಳಿಗೂ ಕೂಡ ವಿದ್ಯುತ್‌ ಪೂರೈಕೆ ಮಾಡುತ್ತಿದೆ. ಕಳೆದ ೧೦ ವರ್ಷದ ಆದಾಯ ಅಂಕಿ ಅಂಶ ಬಿಡುಗಡೆಯಾಗಿದ್ದು, ಆದಾಯ ಗಮನಾರ್ಹ ರೀತಿಯಲ್ಲಿ ಹೆಚ್ಚಾಗಿರುವುದು ಕಂಡುಬಂದಿದೆ.

೨೦೧೩-೧೪ ಹಣಕಾಸು ವರ್ಷದಲ್ಲಿ ೧೧ ಸಾವಿರ ಕೋಟಿ ರೂಪಾಯಿಗಳ ಆದಾಯ ಸಂಗ್ರಹ ಮಾಡಿದ್ದ ಬೆಸ್ಕಾಂ ಬಳಿಕ ಪ್ರತಿ ವರ್ಷವೂ ಕೂಡ ಲಾಭದ ಹಳಿಯಲ್ಲಿಯೇ ಇದೆ. ತದನಂತರ ಪ್ರಮುಖವಾಗಿ ಕಳೆದ ೫ ವರ್ಷಗಳನ್ನ ಗಮನಿಸಿದರೆ ೨೦೨೦ -೨೧ ರಲ್ಲಿ ೧೯,೨೩೩ ಕೋಟಿ, ೨೦೨೧-೨೨ ರಲ್ಲಿ ೨೦,೭೧೨ ಕೋಟಿ, ಹಾಗೂ ೨೨-೨೩ ರಲ್ಲಿ ೨೪,೭೦೦ ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ. ಕಳೆದ ಹಣಕಾಸು ವರ್ಷ ಅಂದರೆ ೨೦೨೩-೨೪ ರಲ್ಲಿ  ಬರೋಬ್ಬರಿ ೩೧,೩೭೮ ಕೋಟಿ ರೂಪಾಯಿಗಳ ಭರ್ಜರಿ ಆದಾಯ ಕಂಡಿದ್ದು, ಸಂತಸವನ್ನು ಬೆಸ್ಕಾಂ ವ್ಯಕ್ತಪಡಿಸಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

41 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

52 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

59 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago