ಬೆಂಗಳೂರು : ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಗೃಹ ಜ್ಯೋತಿ ಯೋಜನೆಯಿಂದ ಎಸ್ಕಾಂಗಳು ನಷ್ಟಕ್ಕೆ ಒಳಗಾಗುತ್ತವೆ ಎಂಬ ಮಾತುಗಳು ಕೇಳುಬರುತ್ತಿದ್ದವು. ಆದರೆ ಇದರ ಮಧ್ಯೆ ಬೆಸ್ಕಾಂ ೨೦೨೩ ಮತ್ತು೨೦೨೪ ರ ಹಣಕಾಸು ವರ್ಷದಲ್ಲಿ ೭ ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಲಾಭ ಕಂಡಿರುವುದು ಗೊತ್ತಾಗಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಬೆಸ್ಕಾಂ ನಗರಕ್ಕೆ ಮಾತ್ರವಲ್ಲದೆ ದಕ್ಷಿಣದ ಸುಮಾರು ೮ ಜಿಲ್ಲೆಗಳಿಗೂ ಕೂಡ ವಿದ್ಯುತ್ ಪೂರೈಕೆ ಮಾಡುತ್ತಿದೆ. ಕಳೆದ ೧೦ ವರ್ಷದ ಆದಾಯ ಅಂಕಿ ಅಂಶ ಬಿಡುಗಡೆಯಾಗಿದ್ದು, ಆದಾಯ ಗಮನಾರ್ಹ ರೀತಿಯಲ್ಲಿ ಹೆಚ್ಚಾಗಿರುವುದು ಕಂಡುಬಂದಿದೆ.
೨೦೧೩-೧೪ ಹಣಕಾಸು ವರ್ಷದಲ್ಲಿ ೧೧ ಸಾವಿರ ಕೋಟಿ ರೂಪಾಯಿಗಳ ಆದಾಯ ಸಂಗ್ರಹ ಮಾಡಿದ್ದ ಬೆಸ್ಕಾಂ ಬಳಿಕ ಪ್ರತಿ ವರ್ಷವೂ ಕೂಡ ಲಾಭದ ಹಳಿಯಲ್ಲಿಯೇ ಇದೆ. ತದನಂತರ ಪ್ರಮುಖವಾಗಿ ಕಳೆದ ೫ ವರ್ಷಗಳನ್ನ ಗಮನಿಸಿದರೆ ೨೦೨೦ -೨೧ ರಲ್ಲಿ ೧೯,೨೩೩ ಕೋಟಿ, ೨೦೨೧-೨೨ ರಲ್ಲಿ ೨೦,೭೧೨ ಕೋಟಿ, ಹಾಗೂ ೨೨-೨೩ ರಲ್ಲಿ ೨೪,೭೦೦ ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ. ಕಳೆದ ಹಣಕಾಸು ವರ್ಷ ಅಂದರೆ ೨೦೨೩-೨೪ ರಲ್ಲಿ ಬರೋಬ್ಬರಿ ೩೧,೩೭೮ ಕೋಟಿ ರೂಪಾಯಿಗಳ ಭರ್ಜರಿ ಆದಾಯ ಕಂಡಿದ್ದು, ಸಂತಸವನ್ನು ಬೆಸ್ಕಾಂ ವ್ಯಕ್ತಪಡಿಸಿದೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…