ಬೆಂಗಳೂರು : ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಗೃಹ ಜ್ಯೋತಿ ಯೋಜನೆಯಿಂದ ಎಸ್ಕಾಂಗಳು ನಷ್ಟಕ್ಕೆ ಒಳಗಾಗುತ್ತವೆ ಎಂಬ ಮಾತುಗಳು ಕೇಳುಬರುತ್ತಿದ್ದವು. ಆದರೆ ಇದರ ಮಧ್ಯೆ ಬೆಸ್ಕಾಂ ೨೦೨೩ ಮತ್ತು೨೦೨೪ ರ ಹಣಕಾಸು ವರ್ಷದಲ್ಲಿ ೭ ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಲಾಭ ಕಂಡಿರುವುದು ಗೊತ್ತಾಗಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಬೆಸ್ಕಾಂ ನಗರಕ್ಕೆ ಮಾತ್ರವಲ್ಲದೆ ದಕ್ಷಿಣದ ಸುಮಾರು ೮ ಜಿಲ್ಲೆಗಳಿಗೂ ಕೂಡ ವಿದ್ಯುತ್ ಪೂರೈಕೆ ಮಾಡುತ್ತಿದೆ. ಕಳೆದ ೧೦ ವರ್ಷದ ಆದಾಯ ಅಂಕಿ ಅಂಶ ಬಿಡುಗಡೆಯಾಗಿದ್ದು, ಆದಾಯ ಗಮನಾರ್ಹ ರೀತಿಯಲ್ಲಿ ಹೆಚ್ಚಾಗಿರುವುದು ಕಂಡುಬಂದಿದೆ.
೨೦೧೩-೧೪ ಹಣಕಾಸು ವರ್ಷದಲ್ಲಿ ೧೧ ಸಾವಿರ ಕೋಟಿ ರೂಪಾಯಿಗಳ ಆದಾಯ ಸಂಗ್ರಹ ಮಾಡಿದ್ದ ಬೆಸ್ಕಾಂ ಬಳಿಕ ಪ್ರತಿ ವರ್ಷವೂ ಕೂಡ ಲಾಭದ ಹಳಿಯಲ್ಲಿಯೇ ಇದೆ. ತದನಂತರ ಪ್ರಮುಖವಾಗಿ ಕಳೆದ ೫ ವರ್ಷಗಳನ್ನ ಗಮನಿಸಿದರೆ ೨೦೨೦ -೨೧ ರಲ್ಲಿ ೧೯,೨೩೩ ಕೋಟಿ, ೨೦೨೧-೨೨ ರಲ್ಲಿ ೨೦,೭೧೨ ಕೋಟಿ, ಹಾಗೂ ೨೨-೨೩ ರಲ್ಲಿ ೨೪,೭೦೦ ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ. ಕಳೆದ ಹಣಕಾಸು ವರ್ಷ ಅಂದರೆ ೨೦೨೩-೨೪ ರಲ್ಲಿ ಬರೋಬ್ಬರಿ ೩೧,೩೭೮ ಕೋಟಿ ರೂಪಾಯಿಗಳ ಭರ್ಜರಿ ಆದಾಯ ಕಂಡಿದ್ದು, ಸಂತಸವನ್ನು ಬೆಸ್ಕಾಂ ವ್ಯಕ್ತಪಡಿಸಿದೆ.
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…