ಬೆಂಗಳೂರು : ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಗೃಹ ಜ್ಯೋತಿ ಯೋಜನೆಯಿಂದ ಎಸ್ಕಾಂಗಳು ನಷ್ಟಕ್ಕೆ ಒಳಗಾಗುತ್ತವೆ ಎಂಬ ಮಾತುಗಳು ಕೇಳುಬರುತ್ತಿದ್ದವು. ಆದರೆ ಇದರ ಮಧ್ಯೆ ಬೆಸ್ಕಾಂ ೨೦೨೩ ಮತ್ತು೨೦೨೪ ರ ಹಣಕಾಸು ವರ್ಷದಲ್ಲಿ ೭ ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಲಾಭ ಕಂಡಿರುವುದು ಗೊತ್ತಾಗಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಬೆಸ್ಕಾಂ ನಗರಕ್ಕೆ ಮಾತ್ರವಲ್ಲದೆ ದಕ್ಷಿಣದ ಸುಮಾರು ೮ ಜಿಲ್ಲೆಗಳಿಗೂ ಕೂಡ ವಿದ್ಯುತ್ ಪೂರೈಕೆ ಮಾಡುತ್ತಿದೆ. ಕಳೆದ ೧೦ ವರ್ಷದ ಆದಾಯ ಅಂಕಿ ಅಂಶ ಬಿಡುಗಡೆಯಾಗಿದ್ದು, ಆದಾಯ ಗಮನಾರ್ಹ ರೀತಿಯಲ್ಲಿ ಹೆಚ್ಚಾಗಿರುವುದು ಕಂಡುಬಂದಿದೆ.
೨೦೧೩-೧೪ ಹಣಕಾಸು ವರ್ಷದಲ್ಲಿ ೧೧ ಸಾವಿರ ಕೋಟಿ ರೂಪಾಯಿಗಳ ಆದಾಯ ಸಂಗ್ರಹ ಮಾಡಿದ್ದ ಬೆಸ್ಕಾಂ ಬಳಿಕ ಪ್ರತಿ ವರ್ಷವೂ ಕೂಡ ಲಾಭದ ಹಳಿಯಲ್ಲಿಯೇ ಇದೆ. ತದನಂತರ ಪ್ರಮುಖವಾಗಿ ಕಳೆದ ೫ ವರ್ಷಗಳನ್ನ ಗಮನಿಸಿದರೆ ೨೦೨೦ -೨೧ ರಲ್ಲಿ ೧೯,೨೩೩ ಕೋಟಿ, ೨೦೨೧-೨೨ ರಲ್ಲಿ ೨೦,೭೧೨ ಕೋಟಿ, ಹಾಗೂ ೨೨-೨೩ ರಲ್ಲಿ ೨೪,೭೦೦ ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ. ಕಳೆದ ಹಣಕಾಸು ವರ್ಷ ಅಂದರೆ ೨೦೨೩-೨೪ ರಲ್ಲಿ ಬರೋಬ್ಬರಿ ೩೧,೩೭೮ ಕೋಟಿ ರೂಪಾಯಿಗಳ ಭರ್ಜರಿ ಆದಾಯ ಕಂಡಿದ್ದು, ಸಂತಸವನ್ನು ಬೆಸ್ಕಾಂ ವ್ಯಕ್ತಪಡಿಸಿದೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…