ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ‘ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2024’ರಲ್ಲಿ ‘ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ’ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಜನವರಿ 18ರಂದು ಹೈದರಾಬಾದ್ನಲ್ಲಿ ನಡೆದ ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2024ರ ಸಮಾರಂಭದಲ್ಲಿ ವಿಮಾನ ನಿಲ್ದಾಣಗಳ ನಿರ್ವಹಣೆಗಾಗಿ ವಿಮಾನ ನಿಲ್ದಾಣವು ’25 ಎಮ್ಪಿಪಿಎ ಟ್ರಾಫಿಕ್ ಪ್ರಶಸ್ತಿ’ ಯೊಂದಿಗೆ ಗುರುತಿಸಲ್ಪಟ್ಟಿದೆ.
ವಾರ್ಷಿಕವಾಗಿ 25 ದಶಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸುತ್ತಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಯ ಶ್ರೇಷ್ಠತೆ, ಪ್ರಯಾಣಿಕರ ಉತ್ತಮ ಅನುಭವ, ಅತ್ಯಾಧುನಿಕ ತಂತ್ರಜ್ಞಾನದ ಬಳಕೆಗೆ ಆದ್ಯತೆ ನೀಡಿರುವುದನ್ನು ಗಮನಿಸಿ ಈ ಪ್ರಶಸ್ತಿಗೆ ಕೆಐಎ ಆಯ್ಕೆ ಮಾಡಲಾಗಿದೆ.
ವಿಶ್ವದ ಅತಿದೊಡ್ಡ ಟರ್ಮಿನಲ್ ಮಾಡುವಲ್ಲಿ ಯಶಸ್ವಿಯಾಗಿದೆ. ಕಳೆದ ವರ್ಷದಲ್ಲಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ತನ್ನ ಪ್ರಯಾಣಿಕರ ಸಾಮರ್ಥ್ಯವನ್ನು ಹೆಚ್ಚಿಸಿದೆ.
ತೊಂದರೆ-ಮುಕ್ತ ಅನುಭವವನ್ನು ಸುಲಭಗೊಳಿಸಲು ಹಾಗೂ ಸುಗಮ ಮತ್ತು ಒತ್ತಡ ಮುಕ್ತ ಪ್ರಯಾಣದ ಅನುಭವ ನೀಡಲು ವಿಮಾನ ನಿಲ್ದಾಣ ಪ್ರವೇಶ ಮತ್ತು ನಿರ್ಗಮನ ದ್ವಾರದಲ್ಲಿ ಮಾಹಿತಿ ಪ್ರದರ್ಶನ ಫಲಕಗಳನ್ನು ಹೆಚ್ಚಾಗಿ ಅಳವಡಿಸಲಾಗಿದೆ. ಚೆಕ್-ಇನ್-ಕೌಂಟರ್ಗಳು ಮತ್ತು ತಿಳಿವಳಿಕೆ ಪ್ರದರ್ಶನ ಫಲಕಗಳನ್ನು ಒಳಗೊಂಡಂತೆ ಪ್ರಗತಿಯನ್ನು ಸಾಧಿಸಿದೆ.
ವಾರ್ಷಿಕವಾಗಿ 25 ಮಿಲಿಯನ್ ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲು ಅಂತಾರಾಷ್ಟ್ರೀಯ ಕಾರ್ಯಾಚರಣೆಗಳನ್ನು ಟರ್ಮಿನಲ್ 1ನಿಂದ ಟರ್ಮಿನಲ್ 2ಗೆ ಸ್ಥಳಾಂತರಿಸಲಾಗಿದೆ.
ಪ್ರಯಾಣಿಕರು ಹೆಚ್ಚುವರಿಯಾಗಿ ಕಾಯುವ ಸಮಯವನ್ನು ಕಡಿಮೆ ಮಾಡಲು ಕೌಂಟರ್ಗಳ ಸಂಖ್ಯೆಯನ್ನು ವಿಸ್ತರಿಸಲಾಗಿದೆ. ಜಾಗತಿಕವಾಗಿ ಗುರುತಿಸಲ್ಪಟ್ಟ ಏರ್ಪೋರ್ಟ್ ಕಾರ್ಬನ್ ಮಾನ್ಯತೆ ಕಾರ್ಯಕ್ರಮದ ಅಡಿಯಲ್ಲಿ ವಿಮಾನ ನಿಲ್ದಾಣವು ಹಂತ 4+ ಪರಿವರ್ತನೆಯ ಸ್ಥಿತಿಯನ್ನು ಹೊಂದಿದೆ.
ನಿಲ್ದಾಣದಲ್ಲಿ ಉತ್ತಮ ಪರಿಸರ ಕಾಪಾಡಿಕೊಳ್ಳುವ ಜತೆಗೆ ಸುಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸಲಾಗಿದೆ. ನಿಲ್ದಾಣದ ಒಳಗಡೆ ಮತ್ತು ಹೊರಗಡೆ ಅರಣ್ಯೀಕರಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ.
ವಿಮಾನ ನಿಲ್ದಾಣವು ಡಿಜಿ ಯಾತ್ರಾ ಮುಖ ಗುರುತಿಸುವಿಕೆ, ಬಿಎಲ್ಆರ್ ಪಲ್ಸ್ ಅಪ್ಲಿಕೇಶನ್ ಮತ್ತು ಸ್ವಯಂ-ಬ್ಯಾಗೇಜ್ ಡ್ರಾಪ್ ಸಿಸ್ಟಮ್ಗಳಂತಹ ಟೆಕ್-ಸಕ್ರಿಯಗೊಳಿಸಿದ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಅಕ್ಟೋಬರ್ 2023ರಲ್ಲಿ, ವಿಮಾನ ನಿಲ್ದಾಣವು ಸತತ ಮೂರು ತಿಂಗಳುಗಳ ಕಾಲ ವಿಶ್ವದ ಅತ್ಯಂತ ಸಮಯೋಚಿತ ವಿಮಾನ ನಿಲ್ದಾಣವೆಂದು ಗುರುತಿಸಲ್ಪಟ್ಟಿತು.
ಕಾರ್ಯಾಚರಣೆಯ ಶ್ರೇಷ್ಠತೆಗೆ ಅದರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಟರ್ಮಿನಲ್ 2 ದೇಶದ ಶ್ರೀಮಂತ ಸಂಸ್ಕ್ರತಿ, ಪರಂಪರೆ ಬಿಂಬಿಸುವ ನಾನಾ ರೂಪದ 60 ಕಲಾಕೃತಿ ಪರದರ್ಶಿಸಲಾಗಿದೆ.
ಪಣಜಿ: ಗೋವಾದ ನೈಟ್ಕ್ಲಬ್ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…
ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ…
ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತನಿಗೂ ನೋಟಿಸ್ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಅಲಿ ಅವರಿಗೆ…
ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…
ಬೆಂಗಳೂರು: 2026ರ ಐಪಿಎಲ್ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್ಸಿಎ ಚುನಾವಣೆ ಮತದಾನದ ವೇಳೆ…