ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ‘ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2024’ರಲ್ಲಿ ‘ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ’ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಜನವರಿ 18ರಂದು ಹೈದರಾಬಾದ್ನಲ್ಲಿ ನಡೆದ ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2024ರ ಸಮಾರಂಭದಲ್ಲಿ ವಿಮಾನ ನಿಲ್ದಾಣಗಳ ನಿರ್ವಹಣೆಗಾಗಿ ವಿಮಾನ ನಿಲ್ದಾಣವು ’25 ಎಮ್ಪಿಪಿಎ ಟ್ರಾಫಿಕ್ ಪ್ರಶಸ್ತಿ’ ಯೊಂದಿಗೆ ಗುರುತಿಸಲ್ಪಟ್ಟಿದೆ.
ವಾರ್ಷಿಕವಾಗಿ 25 ದಶಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸುತ್ತಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಯ ಶ್ರೇಷ್ಠತೆ, ಪ್ರಯಾಣಿಕರ ಉತ್ತಮ ಅನುಭವ, ಅತ್ಯಾಧುನಿಕ ತಂತ್ರಜ್ಞಾನದ ಬಳಕೆಗೆ ಆದ್ಯತೆ ನೀಡಿರುವುದನ್ನು ಗಮನಿಸಿ ಈ ಪ್ರಶಸ್ತಿಗೆ ಕೆಐಎ ಆಯ್ಕೆ ಮಾಡಲಾಗಿದೆ.
ವಿಶ್ವದ ಅತಿದೊಡ್ಡ ಟರ್ಮಿನಲ್ ಮಾಡುವಲ್ಲಿ ಯಶಸ್ವಿಯಾಗಿದೆ. ಕಳೆದ ವರ್ಷದಲ್ಲಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ತನ್ನ ಪ್ರಯಾಣಿಕರ ಸಾಮರ್ಥ್ಯವನ್ನು ಹೆಚ್ಚಿಸಿದೆ.
ತೊಂದರೆ-ಮುಕ್ತ ಅನುಭವವನ್ನು ಸುಲಭಗೊಳಿಸಲು ಹಾಗೂ ಸುಗಮ ಮತ್ತು ಒತ್ತಡ ಮುಕ್ತ ಪ್ರಯಾಣದ ಅನುಭವ ನೀಡಲು ವಿಮಾನ ನಿಲ್ದಾಣ ಪ್ರವೇಶ ಮತ್ತು ನಿರ್ಗಮನ ದ್ವಾರದಲ್ಲಿ ಮಾಹಿತಿ ಪ್ರದರ್ಶನ ಫಲಕಗಳನ್ನು ಹೆಚ್ಚಾಗಿ ಅಳವಡಿಸಲಾಗಿದೆ. ಚೆಕ್-ಇನ್-ಕೌಂಟರ್ಗಳು ಮತ್ತು ತಿಳಿವಳಿಕೆ ಪ್ರದರ್ಶನ ಫಲಕಗಳನ್ನು ಒಳಗೊಂಡಂತೆ ಪ್ರಗತಿಯನ್ನು ಸಾಧಿಸಿದೆ.
ವಾರ್ಷಿಕವಾಗಿ 25 ಮಿಲಿಯನ್ ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲು ಅಂತಾರಾಷ್ಟ್ರೀಯ ಕಾರ್ಯಾಚರಣೆಗಳನ್ನು ಟರ್ಮಿನಲ್ 1ನಿಂದ ಟರ್ಮಿನಲ್ 2ಗೆ ಸ್ಥಳಾಂತರಿಸಲಾಗಿದೆ.
ಪ್ರಯಾಣಿಕರು ಹೆಚ್ಚುವರಿಯಾಗಿ ಕಾಯುವ ಸಮಯವನ್ನು ಕಡಿಮೆ ಮಾಡಲು ಕೌಂಟರ್ಗಳ ಸಂಖ್ಯೆಯನ್ನು ವಿಸ್ತರಿಸಲಾಗಿದೆ. ಜಾಗತಿಕವಾಗಿ ಗುರುತಿಸಲ್ಪಟ್ಟ ಏರ್ಪೋರ್ಟ್ ಕಾರ್ಬನ್ ಮಾನ್ಯತೆ ಕಾರ್ಯಕ್ರಮದ ಅಡಿಯಲ್ಲಿ ವಿಮಾನ ನಿಲ್ದಾಣವು ಹಂತ 4+ ಪರಿವರ್ತನೆಯ ಸ್ಥಿತಿಯನ್ನು ಹೊಂದಿದೆ.
ನಿಲ್ದಾಣದಲ್ಲಿ ಉತ್ತಮ ಪರಿಸರ ಕಾಪಾಡಿಕೊಳ್ಳುವ ಜತೆಗೆ ಸುಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸಲಾಗಿದೆ. ನಿಲ್ದಾಣದ ಒಳಗಡೆ ಮತ್ತು ಹೊರಗಡೆ ಅರಣ್ಯೀಕರಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ.
ವಿಮಾನ ನಿಲ್ದಾಣವು ಡಿಜಿ ಯಾತ್ರಾ ಮುಖ ಗುರುತಿಸುವಿಕೆ, ಬಿಎಲ್ಆರ್ ಪಲ್ಸ್ ಅಪ್ಲಿಕೇಶನ್ ಮತ್ತು ಸ್ವಯಂ-ಬ್ಯಾಗೇಜ್ ಡ್ರಾಪ್ ಸಿಸ್ಟಮ್ಗಳಂತಹ ಟೆಕ್-ಸಕ್ರಿಯಗೊಳಿಸಿದ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಅಕ್ಟೋಬರ್ 2023ರಲ್ಲಿ, ವಿಮಾನ ನಿಲ್ದಾಣವು ಸತತ ಮೂರು ತಿಂಗಳುಗಳ ಕಾಲ ವಿಶ್ವದ ಅತ್ಯಂತ ಸಮಯೋಚಿತ ವಿಮಾನ ನಿಲ್ದಾಣವೆಂದು ಗುರುತಿಸಲ್ಪಟ್ಟಿತು.
ಕಾರ್ಯಾಚರಣೆಯ ಶ್ರೇಷ್ಠತೆಗೆ ಅದರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಟರ್ಮಿನಲ್ 2 ದೇಶದ ಶ್ರೀಮಂತ ಸಂಸ್ಕ್ರತಿ, ಪರಂಪರೆ ಬಿಂಬಿಸುವ ನಾನಾ ರೂಪದ 60 ಕಲಾಕೃತಿ ಪರದರ್ಶಿಸಲಾಗಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…