ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಮಹಾ ದ್ರೋಹ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಬಾರ್ಡ್ ವತಿಯಿಂದ ಕಳೆದ ವರ್ಷ 5600 ಕೋಟಿ ಸಾಲವನ್ನು ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ ಕೇವಲ 2340 ಕೋಟಿ ನೀಡಿದ್ದಾರೆ. ಈ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ಸಾಲದ ಪ್ರಮಾಣವನ್ನು 58% ರಷ್ಟು ಕಡಿಮೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾವು ಕರ್ನಾಟಕ ರಾಜ್ಯದಿಂದ ಕೇಂದ್ರಕ್ಕೆ 4.50 ಲಕ್ಷ ಕೋಟಿ ತೆರಿಗೆ ಕಟ್ಟುತ್ತೇವೆ. ನಮಗೆ ವಾಪಸ್ಸು ಬರುವುದು 59 ಸಾವಿರ ಕೋಟಿ ಮಾತ್ರ. ಉಳಿದ ದುಡ್ಡು ಕೇಂದ್ರದಲ್ಲಿಯೇ ಇರುತ್ತದೆ. ಅದನ್ನು ಎಚ್.ಡಿ.ಕುಮಾರಸ್ವಾಮಿಯವರು ರಾಜ್ಯಕ್ಕೆ ಕೊಡಿಸಲಿ ಎಂದು ವಾಗ್ದಾಳಿ ನಡೆಸಿದರು.
ಏನನ್ನೂ ತಿಳಿಯದೇ ಎಲ್ಲರೂ ಸುಖಾಸುಮ್ಮನೆ ಮಾತನಾಡಿದರೆ ಏನೂ ಪ್ರಯೋಜವಿಲ್ಲ. ಎಚ್.ಡಿ.ದೇವೇಗೌಡರಾಗಲಿ, ಕುಮಾರಸ್ವಾಮಿಯವರಾಗಲಿ ಕರ್ನಾಟಕಕ್ಕೆ ಅನ್ಯಾಯವಾದಾಗ ಮಾತನಾಡಿದ್ದಾರೆಯೇ ಎಂದು ಪ್ರಶ್ನಿಸಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…