ರಾಜ್ಯ

ಬೆತ್ತಲೆ ಪ್ರಕರಣ: ಸಂತ್ರಸ್ತೆಗೆ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

ಬೆಳಗಾವಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಐದು ಲಕ್ಷ ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ.

ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣದ ಸಂತ್ರಸ್ತ ಮಹಿಳೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ಇದಕ್ಕು ಮುನ್ನ ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ವಂಟಮೂರಿಯಲ್ಲಿ ಪರಿಶಿಷ್ಟ ಜಾತಿಯ ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಿರುವುದು ಖಂಡನಾರ್ಹ. ಇದು ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಹೈಕೋರ್ಟ್ ಸಹ ಸರ್ಕಾರಕ್ಕೆ ಛಾಟಿ ಬೀಸಿದೆ.

ಮುಖ್ಯಮಂತ್ರಿಗಳು ಸಂತ್ರಸ್ಥೆಯನ್ನು ಇದವರೆಗೂ ಭೇಟಿ ಮಾಡಿಲ್ಲ. ಗೃಹ ಸಚಿವರು ಹೊರತುಪಡಿಸಿ ಬೇರೆ ಯಾರು ಭೇಟಿ ನೀಡಿಲ್ಲ. ರಾಜ್ಯಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಟೀಕಿಸಿದರು. ಮತ್ತು ಈ ಸಂಬಂಧ ಬಿಜೆಪಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

andolanait

Recent Posts

ಇಂದಿನಿಂದ ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವ

24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…

42 mins ago

ಓದುಗರ ಪತ್ರ | ಕಠಿಣ ಕ್ರಮ ಕೈಗೊಳ್ಳಿ

ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…

46 mins ago

ಓದುಗರ ಪತ್ರ | ನಿ. . . ದರ್ಶನ !

ನಿ. . . ದರ್ಶನ ! ಟೇಪು ಕತ್ತರಿಸಿ, ಗುದ್ದಲಿ ಪೂಜೆ ನೆರವೇರಿಸಿ ಸರಸರನೆ ಪರದೆಯನು ಸರಿಸಿ ನೀಡುವರು ಫೋಟೋಗೆ…

49 mins ago

ಓದುಗರ ಪತ್ರ | ಮಕ್ಕಳ ಸುರಕ್ಷತೆಯ ಬಗ್ಗೆ ಗಮನ ಹರಿಸಿ

ಶಾಲೆಗಳಿಗೆ ಬೇಸಿಗೆ ರಜೆ ಆರಂಭವಾಗಿರುವ ಈ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಹೆಚ್ಚಿನ ನಿಗಾವಹಿಸುವುದು ಅಗತ್ಯವಾಗಿದೆ. ಮಕ್ಕಳು ಬಿಸಿಲಿನಬೇಗೆಯಿಂದ…

54 mins ago

ದ್ವೇಷ ರಾಜಕಾರಣದ ಚಹರೆಗಳು

ರೇಣುಕಾ ನಿಡುಗುಂದಿ ನಿನ್ನೆ (ಏಪ್ರಿಲ್ 2) ಹನುಮ ಜಯಂತಿ. ಒಮ್ಮೆ ಇದೇ ಹನುಮ ಜಯಂತಿಯಂದು ಯಾವುದೋ ಕಾರ್ಯಕ್ರಮಕ್ಕೆಂದು ಹೊರಟವಳು ಸರಿಯಾದ…

59 mins ago

ಬಾ.ನಾ.ಸುಬ್ರಹ್ಮಣ್ಯ ಅವರ ಅಂಕಣ ; ರಾಮಾಯಣದ ರಾವಣ, ಶ್ರೀ ಹನುಮಾನ್‌ ಹನುಮ

ಕನ್ನಡ ನಟರಿಬ್ಬರ ಸೀಮೋಲಂಘನ ನಿನ್ನೆ (ಶುಕ್ರವಾರ) ಹಿಂದಿಯಲ್ಲಿ ತಯಾರಾಗುತ್ತಿರುವ ‘ರಾಮಾಯಣ’ ಚಿತ್ರದ ಮೊದಲ ನೋಟ ಲೋಕಾರ್ಪಣೆ ಆಗಿದೆ. ಇತ್ತೀಚೆಗಷ್ಟೇ ‘ಶ್ರೀ…

1 hour ago