Categories: ರಾಜ್ಯ

ಮನುಷ್ಯ ದ್ವೇಷಿ, ಧರ್ಮದ್ರೋಹಿಗಳ ಬಗ್ಗೆ ಎಚ್ಚರ ಇರಲಿ: ಸಿ.ಎಂ ಸಿದ್ದರಾಮಯ್ಯ

ಬಳ್ಳಾರಿ: ಮನುಷ್ಯ ದ್ವೇಷಿ ಧರ್ಮದ್ರೋಹಿಗಳ ಬಗ್ಗೆ ಎಚ್ಚರ ಇರಲಿ. ಭಾರತ ಬಹುತ್ವದ ದೇಶ. ಸರ್ವಧರ್ಮ‌ ಸಮನ್ವಯ ಭಾರತ ಮಣ್ಣಿನ ಗುಣ. ಇದನ್ನು ಕಾಪಾಡುವುದೇ ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌

ಬಳ್ಳಾರಿ ಧರ್ಮಕ್ಷೇತ್ರದ ಅಮೃತ ಮಹೋತ್ಸವವನ್ನು ಉದ್ಘಾಟಿಸಿ, ಬಡ ಕುಟುಂಬಗಳಿಗೆ ಧರ್ಮ ಸಂಸ್ಥೆ ನೀಡಿದ ಉಚಿತ ಮನೆಗಳನ್ನು ಹಸ್ತಾಂತರಿಸಿ ಅವರು  ಮಾತನಾಡಿದರು.

ಯಾವ ಧರ್ಮವೂ ದ್ವೇಷವನ್ನು ಬೋಧನೆ ಮಾಡುವುದಿಲ್ಲ. ಪ್ರೀತಿ, ಮಾನವೀಯತೆ ಎಲ್ಲ ಧರ್ಮಗಳ ಸಾರ ಎಂದರು.

ಧರ್ಮದ ಅರ್ಥ ಬಹಳ ಸರಳ. ಬಸವಣ್ಣನವರು ಹೇಳಿರುವಂತೆ ದಯೆಯೇ ಧರ್ಮದ ಮೂಲ. ದ್ವೇಷ ಅಸೂಯೆ ಇದ್ದ ಕಡೆ ಧರ್ಮ ಇರುವುದಿಲ್ಲ. ದ್ವೇಷದಿಂದ ಸಮಾಜ ಛಿದ್ರವಾಗುತ್ತದೆ ಎಂದರು.

ನಮ್ಮ ಧರ್ಮವನ್ನು ಪಾಲಿಸೋಣ. ಎಲ್ಲ ಧರ್ಮಗಳನ್ನೂ ಸಹಿಸಿಕೊಳ್ಳುವ ಸಹಿಷ್ಣುತೆ ಬೆಳೆಸಿಕೊಳ್ಳಿ ಎನ್ನುವುದೇ ನಮ್ಮ‌ ಸಂವಿಧಾನದ ಮಹಾನ್ ಮೌಲ್ಯ. ಇದನ್ನು ಪಾಲಿಸುವುದೇ ನಾವು ಸ್ವಾಮಿ ವಿವೇಕಾನಂದರಿಗೆ, ಸಂವಿಧಾನಕ್ಕೆ ನೀಡುವ ಮಹೋನ್ನತ ಗೌರವ ಎಂದರು.

ನಾನು ಯಾವುದೇ ಒಂದು ಧರ್ಮವನ್ನು ಓಲೈಸುವುದಿಲ್ಲ. ನಾನು ಹಿಂದುಗಳನ್ನು ಪ್ರೀತಿಸುವಂತೆಯೇ ಕ್ರೈಸ್ತ, ಮುಸ್ಲಿಂ, ಜೈನ, ಬೌದ್ಧ ಧರ್ಮದವರೆಲ್ಲರನ್ನೂ ಪ್ರೀತಿಸುತ್ತೇನೆ ಎಂದು ವಿವರಿಸಿದರು.

ಹಿಂದುಳಿದವರು, ಅಲ್ಪಸಂಖ್ಯಾತರು, ಶೂದ್ರರು, ದಲಿತರು ಮತ್ತು ಇಡೀ ಮಹಿಳಾ ಕುಲವನ್ನು ಈ ಜಾತಿ ವ್ಯವಸ್ಥೆ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿತ್ತು. ಆದರೆ, ನಮ್ಮ ಸಂವಿಧಾನ ಇವರೆಲ್ಲರನ್ನೂ ಜಾತಿ ಸಂಕೋಲೆಯಿಂದ ಬಿಡುಗಡೆಗೊಳಿಸಿ ಶಿಕ್ಷಣ ಒದಗಿಸಿತು ಎಂದರು.

ನಾನು ವೀರಮಕ್ಕಳ ಕುಣಿತಕ್ಕೆ ಸೇರಿ ಶಿಕ್ಷಣದಿಂದ ವಂಚಿತನಾಗಿದ್ದೆ. ಆದರೆ ನಮ್ಮ ಸಂವಿಧಾನ ಮತ್ತು ಒಬ್ಬ ಗುರುಗಳ ಕಾರಣದಿಂದ ನಾನು ನೇರವಾಗಿ ಐದನೇ ತರಗತಿಯಿಂದ ಶಿಕ್ಷಣ ಪಡೆದೆ. ಪರಿಣಾಮ ನಾನು ಎರಡೆರಡು ಬಾರಿ ಮುಖ್ಯಮಂತ್ರಿ ಆದೆ ಎಂದು ಹೇಳಿದರು.

ಬಸವಣ್ಣನವರು 850 ವರ್ಷಗಳ ಹಿಂದೆ ಇವನಾರವ ಎನ್ನಬೇಡಿ, ಇವ ನಮ್ಮವ ಎನ್ನಿ ಎಂದು ಜಾತಿ ವ್ಯವಸ್ಥೆಯನ್ನು ಧಿಕ್ಕರಿಸಿದ್ದರು. ಆದರೆ, ಇವತ್ತಿಗೂ ಜಾತಿ ಹೋಗಿಲ್ಲ ಎಂದರು.

ಕ್ರೈಸ್ತ ಧರ್ಮ ಗುರುಗಳು, ಕ್ರೈಸ್ತ ಸಂಸ್ಥೆಗಳು ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೂ ಶಿಕ್ಷಣ ಕೊಡುತ್ತಿದ್ದಾರೆ. ಇದು ಸಮಾಜಕ್ಕೆ ಬಹಳ ದೊಡ್ಡ ಕೊಡುಗೆ. ವೈಚಾರಿಕ ಮತ್ತು ವೈಜ್ಞಾನಿಕ ಶಿಕ್ಷಣ ಸಿಕ್ಕಾಗ ಮಾತ್ರ ಶಿಕ್ಷಣದ ಉದ್ದೇಶ ಈಡೇರುತ್ತದೆ ಎಂದರು.

ದೇವ ಒಂದೇ ನಾಮ ಹಲವು ಎನ್ನುವುದು ಎಲ್ಲರ ನಂಬಿಕೆ. ಕಾಲೇ ಕಂಬ, ದೇಹವೇ ದೇಗುಲ, ಶಿರವೇ ಹೊನ್ನ ಕಲಶ ಎಂದು ಬಸವಾದಿ ಶರಣರು ಹೇಳಿದ್ದು ಈ ಕಾರಣಕ್ಕಾಗಿಯೇ ಎನ್ನುತ್ತಾ, ದೇವರಿಲ್ಲದ ಜಾಗವೇ ಇಲ್ಲ ಎನ್ನುವ ಸಂದೇಶವನ್ನು ಸಾರಿದ ಕನಕದಾಸರ ಬಾಳೆಹಣ್ಣಿನ ಕತೆಯನ್ನು ವಿವರಿಸಿದರು.

ಅಂಬೇಡ್ಕರ್ ಅವರು ಸಂವಿಧಾನ ಅಂಗೀಕಾರ ಸಭೆಯಲ್ಲಿ ಮಾಡಿದ ಭಾಷಣವನ್ನು ಪ್ರತಿಯೊಬ್ಬರೂ ಓದಿಕೊಳ್ಳಬೇಕು. ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಕರೆ ನೀಡಿದರು.

ಕ್ರೈಸ್ತ ಧರ್ಮದ ಮಹಾನ್ ಧರ್ಮಗುರು ಪೀಟರ್ ಮಚಾಡೋ, ಸಚಿವರಾದ ಕೆ.ಜೆ.ಜಾರ್ಜ್, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಸಕರಾದ ಭರತ್ ರೆಡ್ಡಿ, ನಾಗೇಂದ್ರ, ಅನ್ನಪೂರ್ಣ ತುಕಾರಾಮ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

2 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

2 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

2 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

2 hours ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

11 hours ago