ರಾಜ್ಯ

ಪೋಷಣ್ ಆ್ಯಪ್ ಹ್ಯಾಕ್ ಬಗ್ಗೆ ಎಚ್ಚರವಿರಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸೈಬರ್ ವಂಚಕರ ಮೋಸದ ಜಾಲಕ್ಕೆ ಬಲಿಯಾಗಬೇಡಿ: ಸಚಿವೆ  ಮನವಿ
ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಪೋಷಣ್ ಆ್ಯಪ್ ಬಗ್ಗೆ ಜಾಗೃತಿ

ಬೆಳಗಾವಿ: ಪೋಷಣ್ ಟ್ರ್ಯಾಕರ್ ಆ್ಯಪ್ ಹ್ಯಾಕ್ ಆಗಿದೆ ಎನ್ನುವ ಮಾಹಿತಿ ಬಂದಿದೆ. ರಾಜ್ಯದ ಮಹಿಳೆಯರು, ಗರ್ಭಿಣಿಯರು ಸೈಬರ್ ವಂಚಕರ ಮೋಸದ ಜಾಲಕ್ಕೆ ಬಲಿಯಾಗಬೇಡಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ.

ಭುವನೇಶ್ವರಿ ಉತ್ಸವದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸೈಬರ್ ವಂಚಕರು, ಗರ್ಭಿಣಿಯರು, ಮಹಿಳೆಯರ ಮಾಹಿತಿಯನ್ನು ಆ್ಯಪ್ ನಲ್ಲಿ ತಿಳಿದು ಮೊಬೈಲ್ ಮೂಲಕ ವಂಚಿಸುತ್ತಿರುವ ಪ್ರಕರಣಗಳು ಕೇಳಿಬರುತ್ತಿದ್ದು, ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದರು.

ಪೋಷಣ್ ಆ್ಯಪ್ ಅನ್ನು ಕೇಂದ್ರ ಸರ್ಕಾರ ನಿರ್ವಹಣೆ ಮಾಡುತ್ತದೆ. ವಂಚನೆಯಾಗುತ್ತಿರುವ ಬಗ್ಗೆ ನಮ್ಮ ಗಮನಕ್ಕೆ ಬಂದ ತಕ್ಷಣ ಕೇಂದ್ರದ ಗಮನ ಸೆಳೆದಿದ್ದೇವೆ. ಜೊತೆಗೆ ನಮ್ಮ 70 ಸಾವಿರ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಂದೇಶ ಕಳುಹಿಸಿ, ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದೇವೆ ಎಂದರು.

ಈ ಕುರಿತು ಸೂಕ್ತ ಕ್ರಮಕ್ಕೆ ಸೂಚಿಸಲಾಗಿದೆ. ಈ ಮೋಸದ ಜಾಲ ಪತ್ತೆಯಾದ ತಕ್ಷಣ ಜನರಲ್ಲಿ ಜಾಗೃತಿ ಮಾಡುವುದಕ್ಕೆ ಕ್ರಮಕೈಗೊಂಡಿದ್ದೇವೆ. ಜನ ಯಾರೂ ಇದರಲ್ಲಿ ಮೋಸ ಹೋಗಬಾರದು ಎಂದು ಸಚಿವರು ಹೇಳಿದರು.

ಎಚ್‌ಡಿಕೆ ಆರೋಪ ನಿರಾಕರಿಸಿದ ಸಚಿವೆ
ಮುಡಾ ಹಗರಣವನ್ನು ವಿಷಯಾಂತರ ಮಾಡುವ ಸಲುವಾಗಿ ತಮ್ಮ ಮೇಲೆ ಕೇಸ್ ಹಾಕಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಆರೋಪವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಳ್ಳಿ ಹಾಕಿದ್ದಾರೆ. ಕಾನೂನು ಪ್ರಕಾರ ಏನು ಕ್ರಮಕೈಗೊಳ್ಳಬೇಕು ಅದನ್ನು ಕೈಗೊಳ್ಳಲಾಗಿದೆ. ಯಾವುದೇ ಪ್ರಕರಣವನ್ನು ವಿಷಯಾಂತರ ಮಾಡುವ ಅವಶ್ಯಕತೆ ಸರ್ಕಾರಕ್ಕಿಲ್ಲ ಎಂದು ಸಚಿವರು ತಿರುಗೇಟು ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

3 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

43 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

3 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

16 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

18 hours ago