ನವದೆಹಲಿ : ನನ್ನನ್ನು ಕೆಣಕಿದರೆ ಹುಷಾರು ಶಿವಕುಮಾರ್. ನನ್ನ ಬಳಿ ಇರುವ ನಿಮ್ಮ ಮೆಟೀರಿಯಲ್ಗಳನ್ನು ತೆಗೆದರೆ ಈ ಭೂಮಿ ಮೇಲೆ ಬದುಕಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾರ್ನಿಂಗ್ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮಗೆ ಸಂಬಂಧಪಟ್ಟ ಮೆಟೀರಿಯಲ್ಗಳು ನಮ್ಮ ಬಳಿ ಬಂದಿರುವುದು ಒಂದಾ ಎರಡ. ಎಲ್ಲಾ ತೆಗೆಯಲು ಪ್ರಾರಂಭಿಸಿದರೆ ಭೂಮಿ ಮೇಲೆ ಬದುಕಲು ಸಾಧ್ಯವಿಲ್ಲ ಎಂದರು.
ಹೆಚ್.ಡಿ.ರೇವಣ್ಣ ಮಕ್ಕಳನ್ನು ಒಳಗೆ ಹಾಕಿಸಲು ಎಲ್ಲವನ್ನು ಮಾಡಿದ್ದೀರಿ. ನಿಮ್ಮಲ್ಲಿ ಯಾರನ್ನೆಲ್ಲಾ ಒಳಗೆ ಕಳಿಸಬೇಕು ಎಂದು ಭಗವಂತ ಈಗಾಗಲೇ ನಿರ್ಧಾರ ಮಾಡಿದ್ದಾನೆ. ಯಾವ ರಕ್ಷಣೆ ಪಡೆದುಕೊಂಡರು ನಿವು ಉಳಿಯಲು ಸಾಧ್ಯವಿಲ್ಲ. ನಾವು ಎಲ್ಲದಕ್ಕೂ ತಯಾರಾಗಿದ್ದೇವೆ ಎಂದರು.
ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ನಡೆದ ಮಾತುಕತೆಯ ಗೌಪ್ಯತೆ ನಿಮಗೆ ಹೇಗೆ ತಿಳಿಯಲು ಸಾಧ್ಯ ? ಆ ಬಗ್ಗೆ ನಿಮಗೆ ಯಾವನು ಮಾಹಿತಿ ನೀಡಿದ್ದು?
ಮುಂದಿನ ದಿನಗಳಲ್ಲಿ ಏನೇನು ಆಗುತ್ತದೆ ಎಂದು ಕಾದು ನೋಡಿ ಸ್ವಲ್ಪ ಎಂದರು.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…