ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಮಹಿಳಾ ಅಧಿಕಾರಿಗೆ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಆರೇಳು ಮಂದಿಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ಎಂಬುವವರು ನೀಡಿದ ದೂರಿನ ಆಧಾರದ ಮೇರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹಳೇನಗರ ಠಾಣೆಯಲ್ಲಿ ಬಿಎನ್ಎಸ್ 132, 352, 351/2, 189/2,190 BNS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
ಇನ್ನೂ ಪ್ರಕರಣದಲ್ಲಿ ಈ ಜಿಲ್ಲೆಯ ಕಾಂಗ್ರೆಸ್ ಶಾಸಕ ಸಂಗಮೇಶ್ ಪುತ್ರ ಬಸವೇಶ್ ವಿರುದ್ಧ ಆರೋಪ ಕೇಳಿ ಬಂದಿದೆ. ಆದರೆ ಎಫ್ಐಆರ್ನಲ್ಲಿ ಶಾಸಕರ ಪುತ್ರನ ಹೆಸರು ಉಲ್ಲೇಖಿಸದೆ ಆರೇಳು ಮಂದಿ ವಿರುದ್ದ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಏನಿದು ಪ್ರಕರಣ?
ಬಿ.ಎಸ್.ಬಸವೇಶ್ಗೆ ಸಂಬಂಧಿಸಿದ ಅಕ್ರಮ ಮರಳುಗಾರಿಕೆಯನ್ನು ತಡೆಯಲು ಭೂ ವಿಜ್ಞಾನಿ ಜ್ಯೋತಿ ಬಂದಿದ್ದರು. ಆದರೆ ಈ ಸಂದರ್ಭದಲ್ಲಿ ಬಸವೇಶ್ ಆಪ್ತರೊಬ್ಬ ಅಧಿಕಾರಿ ಜ್ಯೋತಿ ಅವರಿಗೆ ಫೋನ್ ಕರೆ ಮಾಡಿ ಮಾತನಾಡಿ ಎಂದು ಮೊಬೈಲ್ ಫೋನ್ ನೀಡಿದ್ದರು. ಈ ವೇಳೆ ಸೇವೆಗೆ ಅಡ್ಡಿಪಡಿಸುವಂತೆ ನಿಂದಿಸಿದ್ದಾರೆ ಎಂಬ ಆರೋಪವಿತ್ತು. ಅಲ್ಲದೇ ಈ ಸಂಬಂಧ ಒಂದು ವಿಡಿಯೋ ವೈರಲ್ ಆಗಿತ್ತು.
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…