ರಾಜ್ಯ

ಮಹಿಳಾ ಅಧಿಕಾರಿಗೆ ನಿಂದನೆ ಆರೋಪ: ಎಫ್‌ಐಆರ್‌ ದಾಖಲಿಸಿದ ಪೊಲೀಸರು

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಹಳೇನಗರ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಅಧಿಕಾರಿಗೆ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಆರೇಳು ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ಎಂಬುವವರು ನೀಡಿದ ದೂರಿನ ಆಧಾರದ ಮೇರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹಳೇನಗರ ಠಾಣೆಯಲ್ಲಿ ಬಿಎನ್ಎಸ್ 132, 352, 351/2, 189/2,190 BNS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ಇನ್ನೂ ಪ್ರಕರಣದಲ್ಲಿ ಈ ಜಿಲ್ಲೆಯ ಕಾಂಗ್ರೆಸ್‌ ಶಾಸಕ ಸಂಗಮೇಶ್ ಪುತ್ರ ಬಸವೇಶ್​ ವಿರುದ್ಧ ಆರೋಪ ಕೇಳಿ ಬಂದಿದೆ. ಆದರೆ ಎಫ್‌ಐಆರ್‌ನಲ್ಲಿ ಶಾಸಕರ ಪುತ್ರನ ಹೆಸರು ಉಲ್ಲೇಖಿಸದೆ ಆರೇಳು ಮಂದಿ ವಿರುದ್ದ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಏನಿದು ಪ್ರಕರಣ?

ಬಿ.ಎಸ್‌.ಬಸವೇಶ್‌ಗೆ ಸಂಬಂಧಿಸಿದ ಅಕ್ರಮ ಮರಳುಗಾರಿಕೆಯನ್ನು ತಡೆಯಲು ಭೂ ವಿಜ್ಞಾನಿ​ ಜ್ಯೋತಿ ಬಂದಿದ್ದರು. ಆದರೆ ಈ ಸಂದರ್ಭದಲ್ಲಿ ಬಸವೇಶ್‌ ಆಪ್ತರೊಬ್ಬ ಅಧಿಕಾರಿ ಜ್ಯೋತಿ ಅವರಿಗೆ ಫೋನ್‌ ಕರೆ ಮಾಡಿ ಮಾತನಾಡಿ ಎಂದು ಮೊಬೈಲ್‌ ಫೋನ್‌ ನೀಡಿದ್ದರು. ಈ ವೇಳೆ ಸೇವೆಗೆ ಅಡ್ಡಿಪಡಿಸುವಂತೆ ನಿಂದಿಸಿದ್ದಾರೆ ಎಂಬ ಆರೋಪವಿತ್ತು. ಅಲ್ಲದೇ ಈ ಸಂಬಂಧ ಒಂದು ವಿಡಿಯೋ ವೈರಲ್‌ ಆಗಿತ್ತು.

ಅರ್ಚನ ಎಸ್‌ ಎಸ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

16 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

16 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

18 hours ago