ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಮಹಿಳಾ ಅಧಿಕಾರಿಗೆ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಆರೇಳು ಮಂದಿಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ಎಂಬುವವರು ನೀಡಿದ ದೂರಿನ ಆಧಾರದ ಮೇರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹಳೇನಗರ ಠಾಣೆಯಲ್ಲಿ ಬಿಎನ್ಎಸ್ 132, 352, 351/2, 189/2,190 BNS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
ಇನ್ನೂ ಪ್ರಕರಣದಲ್ಲಿ ಈ ಜಿಲ್ಲೆಯ ಕಾಂಗ್ರೆಸ್ ಶಾಸಕ ಸಂಗಮೇಶ್ ಪುತ್ರ ಬಸವೇಶ್ ವಿರುದ್ಧ ಆರೋಪ ಕೇಳಿ ಬಂದಿದೆ. ಆದರೆ ಎಫ್ಐಆರ್ನಲ್ಲಿ ಶಾಸಕರ ಪುತ್ರನ ಹೆಸರು ಉಲ್ಲೇಖಿಸದೆ ಆರೇಳು ಮಂದಿ ವಿರುದ್ದ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಏನಿದು ಪ್ರಕರಣ?
ಬಿ.ಎಸ್.ಬಸವೇಶ್ಗೆ ಸಂಬಂಧಿಸಿದ ಅಕ್ರಮ ಮರಳುಗಾರಿಕೆಯನ್ನು ತಡೆಯಲು ಭೂ ವಿಜ್ಞಾನಿ ಜ್ಯೋತಿ ಬಂದಿದ್ದರು. ಆದರೆ ಈ ಸಂದರ್ಭದಲ್ಲಿ ಬಸವೇಶ್ ಆಪ್ತರೊಬ್ಬ ಅಧಿಕಾರಿ ಜ್ಯೋತಿ ಅವರಿಗೆ ಫೋನ್ ಕರೆ ಮಾಡಿ ಮಾತನಾಡಿ ಎಂದು ಮೊಬೈಲ್ ಫೋನ್ ನೀಡಿದ್ದರು. ಈ ವೇಳೆ ಸೇವೆಗೆ ಅಡ್ಡಿಪಡಿಸುವಂತೆ ನಿಂದಿಸಿದ್ದಾರೆ ಎಂಬ ಆರೋಪವಿತ್ತು. ಅಲ್ಲದೇ ಈ ಸಂಬಂಧ ಒಂದು ವಿಡಿಯೋ ವೈರಲ್ ಆಗಿತ್ತು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…