ರಾಜ್ಯ

ಭಾಗವತ್‌ ಸಲಹೆ ದೇಶಕ್ಕೆ ಮಾರಕ : ಎಚ್‌ಸಿಎಂ

ಬೆಂಗಳೂರು : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಸಲಹೆ ನೀಡುತ್ತಿರುವುದು ಭಾರತದಂತಹ ಅಭಿವೃದ್ಧಿಶೀಲ ದೇಶದ ಬೆಳವಣಿಗೆಗೆ ಮಾರಕವಾದಂತಹ ಅಂಶವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಜನಸಂಖ್ಯೆಯ ನಿಯಂತ್ರಣ ಮತ್ತು ಕುಟುಂಬ ಕಲ್ಯಾಣಕ್ಕೆ ಸಂಬಂಽಸಿದಂತೆ ೧೯೫೧ರ ಪಂಚ ವಾರ್ಷಿಕ ಯೋಜನೆಯ ಕಾಲದಿಂದ ೧೯೯೩ರ ಎಂ.ಎಸ್.ಸ್ವಾಮಿನಾಥನ್ ಅವರ ರಾಷ್ಟ್ರೀಯ ಜನಸಂಖ್ಯಾ ನೀತಿಯಿಂದ ಮುಂದುವರಿದು ೧೯೯೭ರ ಕುಟುಂಬ ಕಲ್ಯಾಣ ಯೋಜನೆಯವರೆಗೆ ಜನಸಂಖ್ಯಾ ನಿಯಂತ್ರಣ ಮತ್ತು ಕುಟುಂಬ ಕಲ್ಯಾಣಕ್ಕೆ ಸಂಬಂಽಸಿದಂತೆ ನಮ್ಮ ಸರ್ಕಾರಗಳು ಹಲವು ಕಾರ್ಯಕ್ರಮಗಳನ್ನು ರೂಪಿಸಿವೆ.

ಜನಸಂಖ್ಯೆ ರಾಷ್ಟ್ರೀಯ ಸಂಪನ್ಮೂಲವಾಗಿದ್ದರೂ ಕೂಡಾ ಜನಸಂಖ್ಯಾ ಸೋಟ ರಾಷ್ಟ್ರೀಯ ವಿಪತ್ತಿಗೆ ಕಾರಣವಾಗುತ್ತದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಜನಸಂಖ್ಯೆ ಹೆಚ್ಚಾಗುತ್ತಾ ಹೋದಂತೆ ಒಂದು ದೇಶದ ಜನರ ತಲಾ ಆದಾಯ ಕುಗ್ಗುತ್ತದೆ, ಅಪೌಷ್ಟಿಕತೆ ನಿರ್ವಹಣೆ ಕಷ್ಟವಾಗುತ್ತದೆ ಮತ್ತು ಸಾಕ್ಷರತೆಯ ಪ್ರಮಾಣವು ಕುಂಠಿತವಾಗುವ ಸಾಧ್ಯತೆಯಿರುತ್ತದೆ. ಶಿಕ್ಷಣ, ಉದ್ಯೋಗ, ಆರೋಗ್ಯ ಮತ್ತು ಮೂಲ ಸೌಕರ್ಯಗಳನ್ನು ಒದಗಿಸುವಾಗ ಜನರಿಗೆ ಅಸಮರ್ಪಕತೆಯನ್ನು ಎದುರಿಸಬೇಕಾಗುತ್ತದೆ.

ಪ್ರಸ್ತುತ ನಮ್ಮ ದೇಶದ ಜನಸಂಖ್ಯೆಯು ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದೆ. ಈ ಸಂದರ್ಭದಲ್ಲಿ ಜಾತಿ, ಧರ್ಮವನ್ನು ಮೀರಿ ಕುಟುಂಬ ಕಲ್ಯಾಣದ ಸೂತ್ರಗಳನ್ನು ಜನರಿಗೆ ಹೇಳಬೇಕಾಗಿರುವ ವೇಳೆ ಎಲ್ಲವನ್ನೂ ಧರ್ಮದ ಕಣ್ಣಲ್ಲಿ ನೋಡುತ್ತಾ, ಭಗವತ್ ಅವರು ಅವಿವೇಕದ ಸಲಹೆಯನ್ನು ನೀಡುತ್ತಿರುವುದು ದೇಶವನ್ನು ಮೌಢ್ಯತೆ ಮತ್ತು ಅವೈಜ್ಞಾನಿಕತೆಯ ಕಡೆಗೆ ಕೊಂಡೊಯ್ಯುವಂತಾಗಿದೆ.

ಜನಸಂಖ್ಯಾ ನಿಯಂತ್ರಣ ಎಂಬುದು ಎಲ್ಲರೂ ವಿವೇಕಪೂರ್ಣವಾಗಿ ನಿರ್ಧರಿಸಬೇಕಾದ ಸಂಗತಿಯಾಗಿದ್ದು, ಇದು ಹಿಂದೂ, ಮುಸ್ಲಿಂ, ಕ್ರೆ ಸ್ತ, ಪಾರ್ಸಿ ಎನ್ನದೇ ಎಲ್ಲ ಪ್ರಜೆಗಳಿಗೂ ಸಮಾನವಾಗಿ ಇರಬೇಕಾದ ರಾಷ್ಟ್ರೀಯ ತಿಳಿವಳಿಕೆ ಆಗಿದೆ. ಮೋಹನ್ ಭಾಗವತ್ ಅವರಯ ಇನ್ನುಮುಂದಾದರೂ ಇಂತಹಾ ಅವಿವೇಕದ ಸಲಹೆಗಳನ್ನು ನೀಡುವುದನ್ನು ನಿಲ್ಲಿಸಲಿ.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

4 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

4 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

6 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

6 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

6 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

6 hours ago