ರಾಜ್ಯ

ಭಾಗವತ್‌ ಸಲಹೆ ದೇಶಕ್ಕೆ ಮಾರಕ : ಎಚ್‌ಸಿಎಂ

ಬೆಂಗಳೂರು : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಸಲಹೆ ನೀಡುತ್ತಿರುವುದು ಭಾರತದಂತಹ ಅಭಿವೃದ್ಧಿಶೀಲ ದೇಶದ ಬೆಳವಣಿಗೆಗೆ ಮಾರಕವಾದಂತಹ ಅಂಶವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಜನಸಂಖ್ಯೆಯ ನಿಯಂತ್ರಣ ಮತ್ತು ಕುಟುಂಬ ಕಲ್ಯಾಣಕ್ಕೆ ಸಂಬಂಽಸಿದಂತೆ ೧೯೫೧ರ ಪಂಚ ವಾರ್ಷಿಕ ಯೋಜನೆಯ ಕಾಲದಿಂದ ೧೯೯೩ರ ಎಂ.ಎಸ್.ಸ್ವಾಮಿನಾಥನ್ ಅವರ ರಾಷ್ಟ್ರೀಯ ಜನಸಂಖ್ಯಾ ನೀತಿಯಿಂದ ಮುಂದುವರಿದು ೧೯೯೭ರ ಕುಟುಂಬ ಕಲ್ಯಾಣ ಯೋಜನೆಯವರೆಗೆ ಜನಸಂಖ್ಯಾ ನಿಯಂತ್ರಣ ಮತ್ತು ಕುಟುಂಬ ಕಲ್ಯಾಣಕ್ಕೆ ಸಂಬಂಽಸಿದಂತೆ ನಮ್ಮ ಸರ್ಕಾರಗಳು ಹಲವು ಕಾರ್ಯಕ್ರಮಗಳನ್ನು ರೂಪಿಸಿವೆ.

ಜನಸಂಖ್ಯೆ ರಾಷ್ಟ್ರೀಯ ಸಂಪನ್ಮೂಲವಾಗಿದ್ದರೂ ಕೂಡಾ ಜನಸಂಖ್ಯಾ ಸೋಟ ರಾಷ್ಟ್ರೀಯ ವಿಪತ್ತಿಗೆ ಕಾರಣವಾಗುತ್ತದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಜನಸಂಖ್ಯೆ ಹೆಚ್ಚಾಗುತ್ತಾ ಹೋದಂತೆ ಒಂದು ದೇಶದ ಜನರ ತಲಾ ಆದಾಯ ಕುಗ್ಗುತ್ತದೆ, ಅಪೌಷ್ಟಿಕತೆ ನಿರ್ವಹಣೆ ಕಷ್ಟವಾಗುತ್ತದೆ ಮತ್ತು ಸಾಕ್ಷರತೆಯ ಪ್ರಮಾಣವು ಕುಂಠಿತವಾಗುವ ಸಾಧ್ಯತೆಯಿರುತ್ತದೆ. ಶಿಕ್ಷಣ, ಉದ್ಯೋಗ, ಆರೋಗ್ಯ ಮತ್ತು ಮೂಲ ಸೌಕರ್ಯಗಳನ್ನು ಒದಗಿಸುವಾಗ ಜನರಿಗೆ ಅಸಮರ್ಪಕತೆಯನ್ನು ಎದುರಿಸಬೇಕಾಗುತ್ತದೆ.

ಪ್ರಸ್ತುತ ನಮ್ಮ ದೇಶದ ಜನಸಂಖ್ಯೆಯು ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದೆ. ಈ ಸಂದರ್ಭದಲ್ಲಿ ಜಾತಿ, ಧರ್ಮವನ್ನು ಮೀರಿ ಕುಟುಂಬ ಕಲ್ಯಾಣದ ಸೂತ್ರಗಳನ್ನು ಜನರಿಗೆ ಹೇಳಬೇಕಾಗಿರುವ ವೇಳೆ ಎಲ್ಲವನ್ನೂ ಧರ್ಮದ ಕಣ್ಣಲ್ಲಿ ನೋಡುತ್ತಾ, ಭಗವತ್ ಅವರು ಅವಿವೇಕದ ಸಲಹೆಯನ್ನು ನೀಡುತ್ತಿರುವುದು ದೇಶವನ್ನು ಮೌಢ್ಯತೆ ಮತ್ತು ಅವೈಜ್ಞಾನಿಕತೆಯ ಕಡೆಗೆ ಕೊಂಡೊಯ್ಯುವಂತಾಗಿದೆ.

ಜನಸಂಖ್ಯಾ ನಿಯಂತ್ರಣ ಎಂಬುದು ಎಲ್ಲರೂ ವಿವೇಕಪೂರ್ಣವಾಗಿ ನಿರ್ಧರಿಸಬೇಕಾದ ಸಂಗತಿಯಾಗಿದ್ದು, ಇದು ಹಿಂದೂ, ಮುಸ್ಲಿಂ, ಕ್ರೆ ಸ್ತ, ಪಾರ್ಸಿ ಎನ್ನದೇ ಎಲ್ಲ ಪ್ರಜೆಗಳಿಗೂ ಸಮಾನವಾಗಿ ಇರಬೇಕಾದ ರಾಷ್ಟ್ರೀಯ ತಿಳಿವಳಿಕೆ ಆಗಿದೆ. ಮೋಹನ್ ಭಾಗವತ್ ಅವರಯ ಇನ್ನುಮುಂದಾದರೂ ಇಂತಹಾ ಅವಿವೇಕದ ಸಲಹೆಗಳನ್ನು ನೀಡುವುದನ್ನು ನಿಲ್ಲಿಸಲಿ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

8 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

12 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

14 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

15 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 hours ago