ಶಿವಮೊಗ್ಗ : ಸಕ್ರೆಬೈಲು ಬಿಡಾರದ ಆನೆ ಭಾನುಮತಿ (37) ಶನಿವಾರ ಹೆಣ್ಣು ಮರಿಗೆ ಜನ್ಮನೀಡಿದೆ. ತಾಯಿ ಹಾಗೂ ಮರಿ ಆನೆ ಎರಡೂ ಆರೋಗ್ಯದಿಂದ ಇವೆ ಎಂದು ಅರಣ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಇತ್ತೀಚಿಗೆ ಗರ್ಭಿಣಿ ಭಾನುಮತಿ ಆನೆ ಬಿಡಾರದಿಂದ ಕಾಡಿಗೆ ಮೇಯಲು ಹೋದಾಗ ಆಕೆಯ ಬಾಲಕ್ಕೆ ಕಿಡಿಗೇಡಿಗಳು ಕತ್ತಿಯಿಂದ ಗಾಯ ಮಾಡಿದ್ದರು. ವೈದ್ಯರು ಅದಕ್ಕೆ ಹೊಲಿಗೆ ಹಾಕಿ ಸೂಕ್ತ ಚಿಕಿತ್ಸೆ ನೀಡಿದ್ದರು. ನಂತರ ಭಾನುಮತಿ ಚೇತರಿಸಿಕೊಂಡಿದೆ. ಈ ಬಗ್ಗೆ ಅರಣ್ಯ ಇಲಾಖೆ ತನಿಖೆಗೂ ಸಹ ಆದೇಶಿಸಿತ್ತು.
ಇದಾದ ಮೂರನೇ ವಾರಕ್ಕೆ ಭಾನುಮತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ನಾಲ್ಕನೇ ಮರಿ ಇದಾಗಿದೆ. ಈಕೆಯ ಯಾವುದೇ ಮರಿಗಳು ಬೆಳವಣಿಗೆ ಆಗಿಲ್ಲವೆಂದು ತಿಳಿದು ಬಂದಿದೆ.
ಸದ್ಯ ಸಕ್ರಬೈಲಿನಲ್ಲಿ ಆನೆಯ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ದಸರಾ ಮೆರವಣಿಗೆಗೆ ಬಂದ ನೇತ್ರಾವತಿ ಎಂಬ ಆನೆ ಸಹ ಹೆಣ್ಣು ಮರಿಗೆ ಜನ್ಮ ನೀಡಿತ್ತು. ಇದಾದ 15 ದಿನಕ್ಕೆ ಭಾನುಮತಿ ಮತ್ತೊಂದು ಹೆಣ್ಣು ಮರಿಗೆ ಜನ್ಮ ನೀಡಿದೆ. ಹೀಗಾಗಿ ಸಕ್ರೆಬೈಲು ಆನೆ ಬಿಡಾರದಲ್ಲಿ 6 ಹೆಣ್ಣು ಮತ್ತು 16 ಗಂಡು ಆನೆಗಳಿವೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…