Mysore
22
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಭವಾನಿ ರೇವಣ್ಣಾಗೆ ಬಂಧನ ಭೀತಿ !

ಬೆಂಗಳೂರು : ಮಹಿಳೆ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಬಂಧನ ಭೀತಿ ಎದುರಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ನಿರೀಕ್ಷಣ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಭವಾನಿ ಅವರ ಅರ್ಜಿಯನ್ನು ನ್ಯಾಯಾಲಯ ತಿರಸ್ಕಾರ ಮಾಡಿದೆ. ಅದಲ್ಲದೇ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ತಂಡ ಭವಾನಿ ರೇವಣ್ಣ ಅವರಿಗೆ ನೋಟೀಸ್‌ ಕಳಿಸಿದೆ.

ತಿಂಗಳ ಬಳಿಕ ಮಗ ಪ್ರಜ್ವಲ್‌ ರೇವಣ್ಣ ಪ್ರತ್ಯಕ್ಷವಾದ ಬೆನ್ನಲ್ಲೇ ಭವಾನಿ ಅವರಿಗೆ ಸಂಕಷ್ಟ ಎದುರಾಗಿದೆ. ಇನ್ನು ಪ್ರಜ್ವಲ್‌ ಇದೇ ತಿಂಗಳ 31ರಂದು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ವೀಡಿಯೋ ಮೂಲಕ ತಿಳಿಸಿದ್ದಾರೆ

Tags:
error: Content is protected !!