ರಾಜ್ಯ

ಈಶ್ವರ್‌ ಖಂಡ್ರೆ ಪುತ್ರ ಮುಸ್ಲಿಂಮರ ವೋಟ್‌ನಿಂದಲೇ ಗೆದ್ದಿದ್ದಾರೆ: ಜಮೀರ್‌ ಅಹಮ್ಮದ್‌ ಖಾನ್

ಬೀದರ್‌: ಈಶ್ವರ್‌ ಖಂಡ್ರೆ ಪುತ್ರ ಮುಸ್ಲಿಂಮರು ಜಾಸ್ತಿ ವೋಟ್‌ ಹಾಕಿದ ಪರಿಣಾಮ ಗೆದ್ದಿದ್ದಾರೆ ಎಂದು ಸಚಿವ ಜಮೀರ್‌ ಅಹಮ್ಮದ್‌ ಹೇಳಿದ್ದಾರೆ.

ಬೀದರ್‌ನಲ್ಲಿ ಹಮ್ಮಿಕೊಂಡಿದ್ದ ಮುಸ್ಲಿಂ ಜನಾಂಗದ ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೋರ್ವ ಜಮೀರ್‌ ಅಹಮ್ಮದ್‌ ಖಾನ್‌ ಬಳಿ ಸಮಸ್ಯೆ ಹೇಳಿಕೊಳ್ಳುತ್ತಾನೆ. ಈ ವೇಳೆ ಆ ವ್ಯಕ್ತಿಯ ಸಮಸ್ಯೆಗೆ ಸ್ಪಂದಿಸಿದ ಜಮೀರ್‌ ಅಹಮ್ಮದ್‌, ನೀವು ಏನೇ ಸಮಸ್ಯೆಗಳಿದ್ದರೂ ಸಂಸದ ಸಾಗರ್‌ ಖಂಡ್ರೆ ಬಳಿ ಹೇಳಿಕೊಳ್ಳಿ. ಅವರು ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಸಾಗರ್‌ ಖಂಡ್ರೆ ಗೆಲ್ಲಲು ನೀವೆಲ್ಲಾ ಪ್ರಮುಖ ಕಾರಣಕರ್ತರಾಗಿದ್ದೀರಾ. ಎಲ್ಲಾ ಮುಸ್ಲಿಂ ಮತಗಳು ಕಾಂಗ್ರೆಸ್‌ಗೆ ಬಿದ್ದಿವೆ. ಹೀಗಾಗಿ ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದರು.

ನೀವೆಲ್ಲಾ ಕಾಂಗ್ರೆಸ್‌ಗೆ ಮತ ಹಾಕಿದ್ದರಿಂದಲೇ ಸಾಗರ್ ಈ ಗೆಲುವು ಸಾಧಿಸಲು ಸಾಧ್ಯವಾಗಿದೆ. ಆದ್ದರಿಂದ ಮುಸ್ಲಿಂಮರು ಹೇಳಿದ ಕೆಲಸವನ್ನೆಲ್ಲಾ ಸಾಗರ್‌ ಖಂಡ್ರೆ ಮುಲಾಜಿಲ್ಲದೇ ಮಾಡಲೇಬೇಕಾಗುತ್ತದೆ ಎಂದು ಆಗ್ರಹಿಸಿದ್ದಾರೆ.

ಒಟ್ಟಾರೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರ ಈ ಹೇಳಿಕೆಗಳಿಂದ ಪಕ್ಷದಲ್ಲೇ ಭಿನ್ನಮತ ಶುರುವಾಗಿದ್ದು, ಬೀದರ್‌ನಲ್ಲಿ ಮುಸ್ಲಿಂಮರನ್ನು ಬಿಟ್ಟು ಬೇರೆ ಯಾರೂ ಕೂಡ ಸಾಗರ್‌ ಖಂಡ್ರೆಗೆ ಮತ ಹಾಕಿಲ್ವ ಎಂಬ ಅನುಮಾನ ಶುರುವಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

7 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

10 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

10 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

10 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

10 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

10 hours ago