ಬೀದರ್: ಈಶ್ವರ್ ಖಂಡ್ರೆ ಪುತ್ರ ಮುಸ್ಲಿಂಮರು ಜಾಸ್ತಿ ವೋಟ್ ಹಾಕಿದ ಪರಿಣಾಮ ಗೆದ್ದಿದ್ದಾರೆ ಎಂದು ಸಚಿವ ಜಮೀರ್ ಅಹಮ್ಮದ್ ಹೇಳಿದ್ದಾರೆ.
ಬೀದರ್ನಲ್ಲಿ ಹಮ್ಮಿಕೊಂಡಿದ್ದ ಮುಸ್ಲಿಂ ಜನಾಂಗದ ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೋರ್ವ ಜಮೀರ್ ಅಹಮ್ಮದ್ ಖಾನ್ ಬಳಿ ಸಮಸ್ಯೆ ಹೇಳಿಕೊಳ್ಳುತ್ತಾನೆ. ಈ ವೇಳೆ ಆ ವ್ಯಕ್ತಿಯ ಸಮಸ್ಯೆಗೆ ಸ್ಪಂದಿಸಿದ ಜಮೀರ್ ಅಹಮ್ಮದ್, ನೀವು ಏನೇ ಸಮಸ್ಯೆಗಳಿದ್ದರೂ ಸಂಸದ ಸಾಗರ್ ಖಂಡ್ರೆ ಬಳಿ ಹೇಳಿಕೊಳ್ಳಿ. ಅವರು ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಸಾಗರ್ ಖಂಡ್ರೆ ಗೆಲ್ಲಲು ನೀವೆಲ್ಲಾ ಪ್ರಮುಖ ಕಾರಣಕರ್ತರಾಗಿದ್ದೀರಾ. ಎಲ್ಲಾ ಮುಸ್ಲಿಂ ಮತಗಳು ಕಾಂಗ್ರೆಸ್ಗೆ ಬಿದ್ದಿವೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದರು.
ನೀವೆಲ್ಲಾ ಕಾಂಗ್ರೆಸ್ಗೆ ಮತ ಹಾಕಿದ್ದರಿಂದಲೇ ಸಾಗರ್ ಈ ಗೆಲುವು ಸಾಧಿಸಲು ಸಾಧ್ಯವಾಗಿದೆ. ಆದ್ದರಿಂದ ಮುಸ್ಲಿಂಮರು ಹೇಳಿದ ಕೆಲಸವನ್ನೆಲ್ಲಾ ಸಾಗರ್ ಖಂಡ್ರೆ ಮುಲಾಜಿಲ್ಲದೇ ಮಾಡಲೇಬೇಕಾಗುತ್ತದೆ ಎಂದು ಆಗ್ರಹಿಸಿದ್ದಾರೆ.
ಒಟ್ಟಾರೆ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಈ ಹೇಳಿಕೆಗಳಿಂದ ಪಕ್ಷದಲ್ಲೇ ಭಿನ್ನಮತ ಶುರುವಾಗಿದ್ದು, ಬೀದರ್ನಲ್ಲಿ ಮುಸ್ಲಿಂಮರನ್ನು ಬಿಟ್ಟು ಬೇರೆ ಯಾರೂ ಕೂಡ ಸಾಗರ್ ಖಂಡ್ರೆಗೆ ಮತ ಹಾಕಿಲ್ವ ಎಂಬ ಅನುಮಾನ ಶುರುವಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…