Mysore
21
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಎಟಿಎಂಗೆ ಹಣ ಹಾಕಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಗುಂಡಿನ ದಾಳಿ: ಇಬ್ಬರು ಸಾವು

ಬೀದರ್‌: ಎಟಿಎಂಗೆ ಹಣ ಹಾಕಲು ಬಂದ ಎಸ್‌ಬಿಐ ಬ್ಯಾಂಕ್‌ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿಯ ಮುಂದೆಯೇ ನಡೆದಿದೆ.

ಗುಂಡಿನ ದಾಳಿಯಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಓರ್ವ ಸಿಬ್ಬಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದು, ಅವರನ್ನು ಗಿರಿವೆಂಕಟೇಶ್‌ ಎಂದು ಗುರುತಿಸಲಾಗಿದೆ.

ಮತ್ತೋರ್ವ ಸಿಬ್ಬಂದಿ ಶಿವಕುಮಾರ್‌ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬ್ಯಾಂಕ್‌ ಹಾಗೂ ಎಟಿಎಂಗೆ ಹಣ ಹಾಕುವ ಪಿಎಸ್‌ಸಿ ವಾಹನದ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು, ಎಟಿಎಂಗೆ ಹಣ ಹಾಕುವ ವೇಳೆ ಕಣ್ಣಿಗೆ ಖಾರದ ಪುಡಿ ಎರಚಿ ಗುಂಡಿನ ದಾಳಿ ನಡೆಸಿ 93 ಲಕ್ಷ ರೂ. ಹಣ ದೋಚಿ ಪರಾರಿಯಾಗಿದ್ದಾರೆ.

ಇಬ್ಬರು ಮುಸುಕುಧಾರಿ ದುಷ್ಕರ್ಮಿಗಳು ಬ್ಯಾಂಕ್‌ ಸಿಬ್ಬಂದಿಗಳ ಮೇಲೆ ಐದು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್‌ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:
error: Content is protected !!