ಬೀದರ್: ಎಟಿಎಂಗೆ ಹಣ ಹಾಕಲು ಬಂದ ಎಸ್ಬಿಐ ಬ್ಯಾಂಕ್ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಬೀದರ್ನ ಎಸ್ಬಿಐ ಮುಖ್ಯ ಕಚೇರಿಯ ಮುಂದೆಯೇ ನಡೆದಿದೆ.
ಗುಂಡಿನ ದಾಳಿಯಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಓರ್ವ ಸಿಬ್ಬಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದು, ಅವರನ್ನು ಗಿರಿವೆಂಕಟೇಶ್ ಎಂದು ಗುರುತಿಸಲಾಗಿದೆ.
ಮತ್ತೋರ್ವ ಸಿಬ್ಬಂದಿ ಶಿವಕುಮಾರ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬ್ಯಾಂಕ್ ಹಾಗೂ ಎಟಿಎಂಗೆ ಹಣ ಹಾಕುವ ಪಿಎಸ್ಸಿ ವಾಹನದ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು, ಎಟಿಎಂಗೆ ಹಣ ಹಾಕುವ ವೇಳೆ ಕಣ್ಣಿಗೆ ಖಾರದ ಪುಡಿ ಎರಚಿ ಗುಂಡಿನ ದಾಳಿ ನಡೆಸಿ 93 ಲಕ್ಷ ರೂ. ಹಣ ದೋಚಿ ಪರಾರಿಯಾಗಿದ್ದಾರೆ.
ಇಬ್ಬರು ಮುಸುಕುಧಾರಿ ದುಷ್ಕರ್ಮಿಗಳು ಬ್ಯಾಂಕ್ ಸಿಬ್ಬಂದಿಗಳ ಮೇಲೆ ಐದು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…