ರಾಜ್ಯ

ಸೀತಾರಾಮನ್‌ ಹಗರಣಕ್ಕೂ, ಸಿದ್ದರಾಮಯ್ಯ ಪ್ರಕರಣಕ್ಕೂ ಅಜಗಜಾಂತರ ವ್ಯತ್ಯಾಸ: ವಿಪಕ್ಷ ನಾಯಕ ಆರ್‌.ಅಶೋಕ್‌

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಆದೇಶ ನೀಡಿರುವುದಕ್ಕೂ ಸಿಎಂ ಸಿದ್ದರಾಮಯ್ಯ ಅವರ ಮುಡಾ ಪ್ರಕರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಬಾಂಡ್‌ನಿಂದ ಹಣ ಕಬಳಿಕೆ ವಿಚಾರವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಅಧ್ಯಕ್ಷ ನಳೀನ್‌ಕುಮಾರ್‌ ಕಟೀಲ್ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಕೋರ್ಟ್‌ ಆದೇಶ ಮಾಡಿರುವುದಕ್ಕೂ, ಸಿಎಂ ಸಿದ್ದರಾಮಯ್ಯ ಅವರ ಮುಡಾ ಪ್ರಕರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ‌

ಏಕೆಂದರೆ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿ, ಕೋಟ್ಯಾಂತರ ರೂ. ಬೆಲೆಬಾಳುವ ನಿವೇಶನವನ್ನು ಕಬಳಿಕೆ ಮಾಡಿಕೊಂಡಿದ್ದಾರೆ. ಆದರೆ ನಿರ್ಮಲಾ ಸೀತಾರಾಮನ್‌ ಹಣವನ್ನು ತಮ್ಮ ಸ್ವಂತಕ್ಕೆ ಬಳಸದೇ, ಪಕ್ಷಕ್ಕೆ ಬಳಸಿದ್ದಾರೆ. ಈ ಹಣದಲ್ಲಿ ಚುನಾವಣಾ ಬಾಂಡ್‌ ಮೂಲಕ ಕಾಂಗ್ರೆಸ್‌ಗೂ 1,200 ಕೋಟಿ ರೂ.ಗಳಿಗಿಂತ ಹೆಚ್ಚು ಹಣ ದೊರಕಿದೆ. ಹೀಗಾಗಿ ಕಾಂಗ್ರೆಸ್‌ ನಾಯಕರು ಆ ಹಣವನ್ನು ವಾಪಸ್ಸು ನೀಡಿ ಆ ನಂತರ ಕೇಂದ್ರ ಸಚಿವರ ರಾಜೀನಾಮೆ ಬಗ್ಗೆ ಮಾತನಾಡಲಿ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಯಾರಿಗೋ ಹೇಳಿ, ಬಿಜೆಪಿ ಪಕ್ಷದವರ ವಿರುದ್ಧ ದೂರು ದಾಖಲಿಸಿದ್ದಾರೆ ಎಂಬುದು ಈ ದೂರಿನ ಮೂಲಕ ಸಾಬೀತಾಗಿದೆ. ಚುನಾವಣಾ ಸಂದರ್ಭದಲ್ಲಿ ಎಲ್ಲಾ ಪಕ್ಷಗಳು ದೇಣಿಗೆ ಸಂಗ್ರಹಿಸಿವೆ. ಹಾಗಾಗಿ ಹಣ ತೆಗೆದುಕೊಂಡವರ ಮೇಲೆ ಎಫಐಆರ್‌ ದಾಖಲಿಸುವುದಾದರೆ ಎಲ್ಲರ ಮೇಲೂ ದೂರು ದಾಖಲಿಸಬೇಕಾಗುತ್ತದೆ. ಈ ದೂರು ರಾಜಕೀಯ ಪ್ರೇರಿತವಾಗಿದೆ ಎಂದು ಸ್ಪಷ್ಟವಾಗುತ್ತದೆ.

ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಹಲವು ಹಗರಣಗಳನ್ನು ಮಾಡಿ ನುಂಗಿ ನೀರು ಕುಡಿದಿದೆ. ಆದರೆ ಈಗ ಮಾತ್ರ ಸಿಬಿಐ ಅಧಿಕಾರವನ್ನು ರಾಜ್ಯದಲ್ಲಿ ಕಿತ್ತುಕೊಳ್ಳುವ ಪ್ರಯತ್ನ ಮಾಡಿ, ಬಿಜೆಪಿ ನಾಯಕರ ವಿರುದ್ಧ ಮಾತನಾಡುತ್ತಿದೆ. ಚುನಾವಣಾ ಬಾಂಡ್‌ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಿ ಸರ್ಕಾರದಿಂದಲೇ ಆದೇಶ ಹೊರಡಿಸಿತ್ತು. ಆದರೆ ಸಿದ್ದರಾಮಯ್ಯ ಅವರ ಮುಡಾ ಹಗರಣ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಿರಲಿಲ್ಲ. ಕಾಂಗ್ರೆಸ್‌ ನಾಯಕರು ಮುಡಾ ಪ್ರಕರಣದ ಆರೋಪದಿಂದ ತಪ್ಪಿಸಿಕೊಳ್ಳಲಿ ಈ ರೀತಿಯಾಗಿ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಯಲ್ಲಿದ್ದರೆ ಪೊಲೀಸರ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ಹೀಗಾಗಿ ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

9 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

10 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago