ರಾಜ್ಯ

ವಕೀಲ ದೇವರಾಜೇಗೌಡಗೆ ಬಿಗ್‌ ರಿಲೀಫ್..‌ ಹೈಕೋರ್ಟ್‌ ಜಾಮೀನು

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡಗೆ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ(ಜು.1) ಜಾಮೀನು ಮಂಜೂರು ಮಾಡಿದೆ.

ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾಯಪೀಠ ಷರತ್ತಿನ ಜಾಮೀನು ನೀಡಿ ಆದೇಶ ಹೊರಡಿಸಿದೆ. 2023ರ ಡಿ.29ರಂದು ರಂದು ಅತ್ಯಾಚಾರ ಮಾಡಿದ್ದಾರೆ ಎಂದು 2024ರ ಏ.1 ರಂದು ಸಂತ್ರಸ್ತೆ ದೂರು ನೀಡಿದ್ದರು. ಇದಕ್ಕೂ ಮೊದಲು ಹನಿಟ್ರ್ಯಾಪ್ ಎಂದು ದೇವರಾಜೇಗೌಡ ಮಾ.28 ರಂದು ದೂರು ನೀಡಿದ್ದರು. ಇದೀಗ ಈ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ ಜಾಮೀನು ನೀಡಲಾಗಿದೆ.

ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅರುಣ್‌ ಶ್ಯಾಮ್‌, ಮಾರ್ಚ್ 29 ರಂದು ದೇವರಾಜೇಗೌಡ ವಿರುದ್ಧ ಸಂತ್ರಸ್ತೆ ಪತಿ ದೂರು ನೀಡಿದ್ದಾರೆ. ಅದರಲ್ಲಿ ಅತ್ಯಾಚಾರದ ಬಗ್ಗೆ ಯಾವುದೇ ಚಕಾರವಿಲ್ಲ. ಈ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ಪೀಠಕ್ಕೆ ವಿವರಿಸಿದರು. ವಾದ-ಪ್ರತಿವಾದ ಆಲಿಸಿದ ಬಳಿಕ ವಕೀಲ ದೇವರಾಜೇಗೌಡಗೆ ನ್ಯಾ. ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ನೀಡಿ ಆದೇಶಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

11 mins ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

20 mins ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

57 mins ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

1 hour ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

1 hour ago

ಶಾಲಾ ಮಕ್ಕಳಿಗೆ ಕಳಪೆ ಊಟ ; ಮುಖ್ಯ ಶಿಕ್ಷಕಿ ಅಮಾನತ್ತು

ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕಳಪೆ ಊಟ ನೀಡಿದ್ದ ಆರೋಪದ ಮೇಲೆ…

2 hours ago