ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡಗೆ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ(ಜು.1) ಜಾಮೀನು ಮಂಜೂರು ಮಾಡಿದೆ.
ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾಯಪೀಠ ಷರತ್ತಿನ ಜಾಮೀನು ನೀಡಿ ಆದೇಶ ಹೊರಡಿಸಿದೆ. 2023ರ ಡಿ.29ರಂದು ರಂದು ಅತ್ಯಾಚಾರ ಮಾಡಿದ್ದಾರೆ ಎಂದು 2024ರ ಏ.1 ರಂದು ಸಂತ್ರಸ್ತೆ ದೂರು ನೀಡಿದ್ದರು. ಇದಕ್ಕೂ ಮೊದಲು ಹನಿಟ್ರ್ಯಾಪ್ ಎಂದು ದೇವರಾಜೇಗೌಡ ಮಾ.28 ರಂದು ದೂರು ನೀಡಿದ್ದರು. ಇದೀಗ ಈ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ ಜಾಮೀನು ನೀಡಲಾಗಿದೆ.
ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್, ಮಾರ್ಚ್ 29 ರಂದು ದೇವರಾಜೇಗೌಡ ವಿರುದ್ಧ ಸಂತ್ರಸ್ತೆ ಪತಿ ದೂರು ನೀಡಿದ್ದಾರೆ. ಅದರಲ್ಲಿ ಅತ್ಯಾಚಾರದ ಬಗ್ಗೆ ಯಾವುದೇ ಚಕಾರವಿಲ್ಲ. ಈ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ಪೀಠಕ್ಕೆ ವಿವರಿಸಿದರು. ವಾದ-ಪ್ರತಿವಾದ ಆಲಿಸಿದ ಬಳಿಕ ವಕೀಲ ದೇವರಾಜೇಗೌಡಗೆ ನ್ಯಾ. ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ನೀಡಿ ಆದೇಶಿಸಿದೆ.
ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ…
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ (ಬಾಳೇಬರೆ) ಪ್ರದೇಶದಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ…
ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ…
ನವದೆಹಲಿ : ಬಿಹಾರದ ಮುಖ್ಯಮಂತ್ರಿ, ಜೆಡಿಯು ರಾಷ್ಟ್ರೀಯ ಅಧ್ಯಕ್ಷರೂ ಆದ ನಿತೀಶ್ ಕುಮಾರ್ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ…
ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ…
ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು…