ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡಗೆ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ(ಜು.1) ಜಾಮೀನು ಮಂಜೂರು ಮಾಡಿದೆ.
ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾಯಪೀಠ ಷರತ್ತಿನ ಜಾಮೀನು ನೀಡಿ ಆದೇಶ ಹೊರಡಿಸಿದೆ. 2023ರ ಡಿ.29ರಂದು ರಂದು ಅತ್ಯಾಚಾರ ಮಾಡಿದ್ದಾರೆ ಎಂದು 2024ರ ಏ.1 ರಂದು ಸಂತ್ರಸ್ತೆ ದೂರು ನೀಡಿದ್ದರು. ಇದಕ್ಕೂ ಮೊದಲು ಹನಿಟ್ರ್ಯಾಪ್ ಎಂದು ದೇವರಾಜೇಗೌಡ ಮಾ.28 ರಂದು ದೂರು ನೀಡಿದ್ದರು. ಇದೀಗ ಈ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ ಜಾಮೀನು ನೀಡಲಾಗಿದೆ.
ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್, ಮಾರ್ಚ್ 29 ರಂದು ದೇವರಾಜೇಗೌಡ ವಿರುದ್ಧ ಸಂತ್ರಸ್ತೆ ಪತಿ ದೂರು ನೀಡಿದ್ದಾರೆ. ಅದರಲ್ಲಿ ಅತ್ಯಾಚಾರದ ಬಗ್ಗೆ ಯಾವುದೇ ಚಕಾರವಿಲ್ಲ. ಈ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ಪೀಠಕ್ಕೆ ವಿವರಿಸಿದರು. ವಾದ-ಪ್ರತಿವಾದ ಆಲಿಸಿದ ಬಳಿಕ ವಕೀಲ ದೇವರಾಜೇಗೌಡಗೆ ನ್ಯಾ. ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ನೀಡಿ ಆದೇಶಿಸಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…
ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…