ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಟೊಮೊಟೊ ದರ ಶತಕದ ಸಮೀಪಕ್ಕೆ ಬಂದಿದೆ. ಟೊಮೊಟೊ ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ.
ತಳ್ಳುವ ಗಾಡಿಗಳಲ್ಲಿ ಚಿಲ್ಲರೆ ಮಾರಾಟ ದರ 90ರೂವರೆಗೆ ಏರಿಕೆಯಾಗಿದೆ. ಮಾರುಕಟ್ಟೆಗೆ ಬರುವ ಟೊಮೊಟೊ ಪ್ರಮಾಣದಲ್ಲಿ ಇಳಿಕೆಯಾಗಿದ್ದರಿಂದ ಬೆಲೆ ಏರಿಕೆಯಾಗಿದೆ.
ಪ್ರತಿಯೊಂದು ತಿಂಡಿಗಳನ್ನು ಮಾಡಬೇಕೆಂದರೆ ಟೊಮೊಟೋ ಬೇಕೇ ಬೇಕು. ಹೀಗಾಗಿ ಗ್ರಾಹಕರು ಬೆಲೆ ಜಾಸ್ತಿಯಾದರೂ ಟೊಮೊಟೋ ಕೊಂಡುಕೊಳ್ಳಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಹೆಚ್ಚಿನ ಬೆಲೆ ಇರುವುದರಿಂದ ಒಂದು ಕೆಜಿ ಟೊಮೊಟೊ ತೆಗೆದುಕೊಳ್ಳುವ ಬದಲು ಅರ್ಧ ಕೆಜಿ ಹಾಗೂ ಕಾಲು ಕೆಜಿ ತೆಗೆದುಕೊಳ್ಳುತ್ತಿದ್ದಾರೆ.
ಮುಂದಿನ ದಿನಗಳಲ್ಲಿ ಟೊಮೊಟೊ ಇಳುವರಿ ಜಾಸ್ತಿಯಾದರಷ್ಟೇ ಬೆಲೆ ಕಡಿಮೆಯಾಗಲಿದೆ. ಟೊಮೊಟೊ ಬೆಳೆದ ರೈತರ ಮೊಗದಲ್ಲಿ ಸಂತಸ ಮೂಡಿದರೆ, ಕೊಳ್ಳುವವರ ಜೇಬಿಗೆ ಕತ್ತರಿ ಬೀಳುತ್ತಿದೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…