ರಾಜ್ಯ

ಬೆಂಗಳೂರು ಜನತೆಗೆ ಬಿಗ್‌ ಶಾಕ್‌: ನೀರಿನ ದರ 1 ಪೈಸೆ ಹೆಚ್ಚಳ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ನೀರಿನ ದರವನ್ನು 1 ಪೈಸೆ ಏರಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಇಂದು(ಮಾರ್ಚ್.‌14) ಈ ಕುರಿತು ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಎಂಎಲ್‌ಸಿ
ರಾಮೋಜಿರಾವ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿ ಲೀಟರ್ ನೀರಿನ ದರವನ್ನು 10 ಪೈಸೆಗೆ ಏರಿಕೆ ಮಾಡಬೇಕೆಂದು ಬೆಂಗಳೂರು ನೀರು ಸರಬರಾಜು ಮಂಡಳಿ ಪ್ರಸ್ತಾವನೆ ಸಲ್ಲಿಸಿದೆ. ಏಕಾಏಕಿ ಇಷ್ಟು ದೊಡ್ಡ ಮಟ್ಟದ ದರವನ್ನು ಪರಿಷ್ಕರಣೆ ಮಾಡಿದರೆ ಗ್ರಾಹಕರಿಗೆ ಹೊರೆಯಾಗುತ್ತದೆ ಎಂಬ ಕಾರಣಕ್ಕೆ 1 ಪೈಸೆಯನ್ನು ಏರಿಕೆ ಮಾಡಲು ನಿರ್ಧಾರಿಸಲಾಗಿದೆ ಎಂದರು.

ಬೆಂಗಳೂರಿನಲ್ಲಿ 2014 ರಿಂದ ನೀರಿನ ದರವನ್ನು ಪರಿಷ್ಕರಣೆ ಮಾಡಿಲ್ಲ. ಅದರ ಪರಿಣಾಮವಾಗಿ ಬಿಡಬ್ಲ್ಯುಎಸ್‍ಎಸ್‍ಬಿಗೆ ಪ್ರತಿ ವರ್ಷ ಕೋಟ್ಯಂತರ ರೂ. ನಷ್ಟವಾಗುತ್ತಿದೆ. ಅಲ್ಲಿನ ಸಿಬ್ಬಂದಿಗೂ ವೇತನ ನೀಡಲು ಕಷ್ಟವಾಗುತ್ತದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಹೀಗಾಗಿ ಸಿಬ್ಬಂದಿಗಳ ವೇತನ, ವಿದ್ಯುತ್ ಬಿಲ್ ಮತ್ತು ನಿರ್ವಹಣೆ, ಪೈಪ್ ಅಳವಡಿಕೆ ಸೇರಿದಂತೆ ಇನ್ನಿತರ ಕೆಲಸ ಕಾರ್ಯಗಳಿಗೆ ಪ್ರತಿ ತಿಂಗಳು ಕೋಟ್ಯಂತರ ರೂ. ಹಣ ವ್ಯಯವಾಗುತ್ತದೆ. ನಾವು ನೀರಿನ ದರವನ್ನು ಪರಿಷ್ಕರಣೆ ಮಾಡದಿದ್ದರೆ ಇದನ್ನು ನಿರ್ವಹಿಸುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಜಲಮಂಡಳಿಯವರು 2014 ರಿಂದ ನೀರಿನ ದರ ಪರಿಷ್ಕರಣೆ ಆಗದ ಹಿನ್ನಲೆಯಲ್ಲಿ ಅನೇಕ ಬಾರಿ ಪ್ರಸ್ತಾವನೆ ಸಲ್ಲಿಸಿದ್ದು, ಪ್ರತಿ ಲೀಟರ್‌ಗೆ 10 ಪೈಸೆಯಿಂದ 7 ಪೈಸೆವರೆಗೂ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿದ್ದರು.
ನಾವು ಒಂದು ಕಡೆ ಜಲಮಂಡಳಿ ನಿರ್ವಹಣೆ ಮತ್ತೊಂದು ಕಡೆ ಸಾರ್ವಜನಿಕರ ಹಿತವನ್ನು ಕಾಪಾಡಬೇಕು. ಹೀಗಾಗಿ ಎಲ್ಲವನ್ನು ಸರಿದೂಗಿಸಲು ಪ್ರತಿ ಲೀಟರ್ 1 ಪೈಸೆ ಹೆಚ್ಚಳ ಮಾಡುತ್ತಿದ್ದೇವೆ. ಸಾರ್ವಜನಿಕರು ಸ್ವಲ್ಪ ಸಮಸ್ಯೆಯಾದರೂ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ರಾಮೋಜಿ ರಾವ್‌ ಪ್ರಶ್ನೆ ಏನಾಗಿತ್ತು?

ವಿಧಾನ ಪರಿಷತ್ ಸದಸ್ಯ ರಾಮೋಜಿ ರಾವ್ ಅವರು, ನೀರಿನ ಟ್ಯಾಂಕರ್‌ಗಳ ದರ ಹೆಚ್ಚಾಗುತ್ತಿದೆ. ಕೆಲವು ಬಡಾವಣೆಗಳಲ್ಲಿ ನೀರು ಸರಿಯಾಗಿಪೂರೈಕೆ ಆಗುತ್ತಿಲ್ಲ ಯಾಕೆ ಎಂದು ಪ್ರಶ್ನಿಸಿದರು.

ಖಾಸಗಿ ನೀರಿನ ಟ್ಯಾಂಕರ್‌ಗಳು ದುಪ್ಪಟ್ಟು  ದರದ ಬೇಡಿಕೆ ಇಡುತ್ತಿವೆ. ಹೀಗಾಗಿ ಉಚಿತ ನೀರಿನ ಟ್ಯಾಂಕರ್‌ಗಳನ್ನು ತುರ್ತಾಗಿ ವ್ಯವಸ್ಥೆ ಮಾಡಿ ಎಂದು ಮನವಿ ಮಾಡಿದರು.

ಅರ್ಚನ ಎಸ್‌ ಎಸ್

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

8 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

9 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

10 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

10 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

11 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

11 hours ago