ರಾಜ್ಯ

ಕಮಲ್‌ ಹಾಸನ್‌ಗೆ ಹೈಕೋರ್ಟ್‌ ಬಿಗ್‌ ಶಾಕ್‌

ಬೆಂಗಳೂರು: ಕನ್ನಡಿಗರ ಕ್ಷಮೆ ಕೇಳದೇ ಮೊಂಡಾಟ ಮೆರೆದಿದ್ದ ನಟ ಕಮಲ್‌ ಹಾಸನ್‌ಗೆ ಹೈಕೋರ್ಟ್‌ ಬಿಗ್‌ ಶಾಕ್‌ ನೀಡಿದೆ.

ಥಗ್‌ಲೈಫ್‌ ಬಿಡುಗಡೆಗೆ ಭದ್ರತೆ ಕೋರಿ ನಟ ಕಮಲ್‌ ಹಾಸನ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್‌ ಕಮಲ್‌ ಹಾಸನ್‌ಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಜೂನ್.‌10ರವರೆಗೂ ಥಗ್‌ಲೈಫ್‌ ಸಿನಿಮಾ ಬಿಡುಗಡೆ ಮಾಡದಂತೆ ಆದೇಶ ಹೊರಡಿಸಿದೆ.

ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್‌ ಹಾಸನ್‌ ಅವರು, ಥಗ್‌ಲೈಫ್‌ ಚಿತ್ರ ಬಿಡುಗಡೆಗೆ ತೊಂದರೆ ಆಗುತ್ತಿದೆ ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಕಮಲ್‌ ಹಾಸನ್‌ಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತು. ನಿಮ್ಮ ಹೇಳಿಕೆಗಳಿಂದ ನಟ ಶಿವರಾಜ್‌ಕುಮಾರ್‌ ಮುಜುಗರ ಅನುಭವಿಸುವಂತಾಗಿದೆ. ನೆಲ, ಜಲ ವಿಚಾರದಲ್ಲಿ ರಾಜೀ ಮಾತೆ ಇಲ್ಲ. ಕಮಲ್‌ ಹಾಸನ್‌ ಕ್ಷಮೆ ಕೇಳಿದರೆ ಮಾತ್ರ ಅರ್ಜಿ ಪರಿಗಣಿಸಲಾಗುವುದು ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರು ತೀವ್ರ ತರಾಟೆಗೆ ತೆಗೆದುಕೊಂಡರು. ಬಳಿಕ ಮಧ್ಯಾಹ್ನಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿತ್ತು.

ಇಂದು ಮಧ್ಯಾಹ್ನ ಮತ್ತೆ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಕಮಲ್‌ ಹಾಸನ್‌ಗೆ ವಿವೇಚನೆಯ ಪಾಠ ಹೇಳಿದ್ದು, ಒಂದು ವಾರಗಳ ಕಾಲ ಅಂದರೆ ಜೂನ್.‌10ರವರೆಗೂ ರಾಜ್ಯದಲ್ಲಿ ಥಗ್‌ಲೈಫ್‌ ಸಿನಿಮಾ ಬಿಡುಗಡೆಗೆ ಅವಕಾಶವಿಲ್ಲ ಎಂದು ತೀರ್ಪು ನೀಡಿದೆ.

ಜೂನ್.‌10ರ ಮಧ್ಯಾಹ್ನ 3.30ಕ್ಕೆ ಮತ್ತೆ ಅರ್ಜಿ ವಿಚಾರಣೆ ನಡೆಯಲಿದ್ದು, ಸಮಸ್ಯೆ ಬಗೆಹರಿಯುವವರೆಗೂ ಸಿನಿಮಾ ರಿಲೀಸ್‌ ಮಾಡದಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜೂನ್.‌5ಕ್ಕೆ ರಾಜ್ಯದಲ್ಲಿ ಥಗ್‌ಲೈಫ್‌ ಸಿನಿಮಾ ಬಿಡುಗಡೆಗೆ ಹೈಕೋರ್ಟ್‌ ತಡೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಇಂಧನ ಯೋಜನೆಗಳ ಭೂ ಪರಿವರ್ತನೆ ಇನ್ಮುಂದೆ ಆಟೋಮ್ಯಾಟಿಕ್

ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…

26 mins ago

ಜ.25 ರಂದು ಮೈಸೂರಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ

ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…

43 mins ago

ಕಾಡ್ಗಿಚ್ಚು ತಡೆಗೆ ಮುನ್ನೆಚ್ಚರಿಕೆ ವಹಿಸಿ : ಅರಣ್ಯಾಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…

53 mins ago

ಸಿಲಿಕಾನ್‌ ಸಿಟಿಗೆ ಟ್ರಾಫಿಕ್‌ ಹೊರೆ : ಬೆಂಗಳೂರು ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ 2ನೇ ನಗರ

ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…

1 hour ago

ಮೈಸೂರಿನ ಒರಿಜಿನಲ್‌ ಮೈಲಾರಿ ಹೋಟೆಲ್‌ ಇದೀಗ ಬೆಂಗಳೂರಲ್ಲೂ ಲಭ್ಯ

ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…

1 hour ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ 25 ಲಕ್ಷ ನಗದು ಬಹುಮಾನ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…

3 hours ago