ರಾಜ್ಯ

ಬಂದ್‌ಗೆ ಮುಂದಾಗಿದ್ದ ಸಾರಿಗೆ ಸಂಘಟನೆಗಳಿಗೆ ಬಿಗ್‌ ಶಾಕ್‌ ನೀಡಿದ ಕಾರ್ಮಿಕ ಇಲಾಖೆ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಆಗಸ್ಟ್.‌5ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ಸಂಘಟನೆಗಳಿಗೆ ಕಾರ್ಮಿಕ ಇಲಾಖೆ ಬಿಗ್‌ ಶಾಕ್‌ ನೀಡಿದೆ.

ಪ್ರತಿಭಟನೆ ನಿಷೇಧಿಸಿ ಕಾರ್ಮಿಕ ಇಲಾಕೆ ಎಸ್ಮಾ ಜಾರಿ ಮಾಡಿದ್ದು, ಮುಷ್ಕರ ನಡೆಸದಂತೆ ನೌಕರರಿಗೆ ತಾಕೀತು ಮಾಡಲಾಗಿದೆ. ಆಗಸ್ಟ್.‌5ರಂದು ಬಸ್‌ಗಳನ್ನು ನಿಲ್ಲಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಂಘಟನೆಗಳು ಮುಂದಾಗಿದ್ದವು. ಜನಸಾಮಾನ್ಯರಿಗೆ ಸಾರಿಗೆ ಸೇವೆ ಒದಗಿಸುವುದು ಅಗತ್ಯ ಸೇವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯಿದೆ 2013ರ ಅಡಿ ಎಸ್ಮಾ ಜಾರಿ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಇಂದಿನಿಂದ ಆರು ತಿಂಗಳು ನೌಕರರು ಯಾವುದೇ ಮುಷ್ಕರದಲ್ಲಿ ಭಾಗಿಯಾಗದಂತೆ ಎಸ್ಮಾ ಜಾರಿಗೊಳಿಸಲಾಗಿದೆ. ಜುಲೈ.1ರಿಂದ ಡಿಸೆಂಬರ್.‌31ರವರೆಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಕೆಎಸ್‌ಆರ್‌ಟಿಸಿ ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಸರ್ಕಾರದ ಅಧಿಸೂಚನೆಯ ಪ್ರತಿಯನ್ನು ಎಲ್ಲಾ ಘಟಕ, ಕಾರ್ಯಾಗಾರ, ಕಚೇರಿ ಮತ್ತು ಬಸ್‌ ನಿಲ್ದಾಣಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು. ಆ ಮೂಲಕ ಈ ವಿಚಾರವನ್ನು ಎಲ್ಲಾ ನೌಕರರ ಗಮನಕ್ಕೆ ತರಲಾಗುವುದು ಎಂದು ಇಲಾಖೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

23 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

23 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

23 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

23 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

23 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

23 hours ago