big shocking for ksrtc transport unions
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಆಗಸ್ಟ್.5ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ಸಂಘಟನೆಗಳಿಗೆ ಕಾರ್ಮಿಕ ಇಲಾಖೆ ಬಿಗ್ ಶಾಕ್ ನೀಡಿದೆ.
ಪ್ರತಿಭಟನೆ ನಿಷೇಧಿಸಿ ಕಾರ್ಮಿಕ ಇಲಾಕೆ ಎಸ್ಮಾ ಜಾರಿ ಮಾಡಿದ್ದು, ಮುಷ್ಕರ ನಡೆಸದಂತೆ ನೌಕರರಿಗೆ ತಾಕೀತು ಮಾಡಲಾಗಿದೆ. ಆಗಸ್ಟ್.5ರಂದು ಬಸ್ಗಳನ್ನು ನಿಲ್ಲಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಂಘಟನೆಗಳು ಮುಂದಾಗಿದ್ದವು. ಜನಸಾಮಾನ್ಯರಿಗೆ ಸಾರಿಗೆ ಸೇವೆ ಒದಗಿಸುವುದು ಅಗತ್ಯ ಸೇವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯಿದೆ 2013ರ ಅಡಿ ಎಸ್ಮಾ ಜಾರಿ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದಿನಿಂದ ಆರು ತಿಂಗಳು ನೌಕರರು ಯಾವುದೇ ಮುಷ್ಕರದಲ್ಲಿ ಭಾಗಿಯಾಗದಂತೆ ಎಸ್ಮಾ ಜಾರಿಗೊಳಿಸಲಾಗಿದೆ. ಜುಲೈ.1ರಿಂದ ಡಿಸೆಂಬರ್.31ರವರೆಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಕೆಎಸ್ಆರ್ಟಿಸಿ ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಸರ್ಕಾರದ ಅಧಿಸೂಚನೆಯ ಪ್ರತಿಯನ್ನು ಎಲ್ಲಾ ಘಟಕ, ಕಾರ್ಯಾಗಾರ, ಕಚೇರಿ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು. ಆ ಮೂಲಕ ಈ ವಿಚಾರವನ್ನು ಎಲ್ಲಾ ನೌಕರರ ಗಮನಕ್ಕೆ ತರಲಾಗುವುದು ಎಂದು ಇಲಾಖೆ ತಿಳಿಸಿದೆ.
ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…