Basava Jayamruthyunjaya Swamiji’s health condition varies
ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್ಮೇಲ್ ಆರೋಪ ಮಾಡಿದ್ದ ಮಹಿಳೆ ಈಗ ಉಲ್ಟಾ ಹೊಡೆದಿದ್ದಾರೆ.
ತಮ್ಮ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ ಸಂತ್ರಸ್ತ ಮಹಿಳೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಡಾ.ಜಿ.ಪರಮೇಶ್ವರ್, ಮಹಿಳಾ ಆಯೋಗ ಮತ್ತು ಮಾನವ ಹಕ್ಕುಗಳ ಆಯೋಗಕ್ಕೂ ದೂರು ಕೊಟ್ಟಿದ್ದರು.
ಇದೀಗ ಉಲ್ಟಾ ಹೊಡೆದಿರುವ ಮಹಿಳೆ, ನಾನು ಯಾರೊಬ್ಬರಿಗೂ ದೂರನ್ನೇ ಕೊಟ್ಟಿಲ್ಲ. ನನ್ನ ಮೇಲೆ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾದವು. ಸ್ವಾಮೀಜಿಯವರ ಮೇಲೆ ನನಗೆ ಅಪಾರವಾದ ಗೌರವವಿದೆ ಎಂದು ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.
ನನ್ನ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಯಾವುದೇ ಲೈಂಗಿಕ ದೌರ್ಜನ್ಯ ಎಸಗಿಲ್ಲ. ಅಲ್ಲದೆ ನಾನು ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತೇನೆಂಬ ಆರೋಪ ಕೇಳಿ ಮನಸ್ಸಿಗೆ ನೋವಾಗಿದೆ. ನಾವು ಹಣ ಕೇಳುವ ದುಸ್ಥಿತಿಗೆ ಬಂದಿಲ್ಲ. ಇದರ ಹಿಂದೆ ಯಾರಿದ್ದಾರೋ ಎಂಬುದು ಗೊತ್ತೂ ಇಲ್ಲ ಎಂದು ವದಂತಿಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…
‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…
ಮೈಸೂರಿನ ಹಾರ್ಡಿಂಜ್ ವೃತ್ತದ ಮೂಲಕ ಮೈಸೂರಿನಿಂದ- ಚಾಮರಾಜ ನಗರ, ಗುಂಡ್ಲುಪೇಟೆ, ಹಾಸನ, ಮಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಹಾಗೂ ಇನ್ನಿತರ ಸ್ಥಳಗಳ…
ಪ್ರೊ.ಬಿ.ಜಯಪ್ರಕಾಶ್ಗೌಡ ಡಾ.ರಾಮೇಗೌಡ, ದಿ.ಸಿಂಗಾರಿಗೌಡ ಹೆಸರಲ್ಲಿ ಗೌರವ ವಿಮರ್ಶಕ, ಜಾನಪದ ತಜ್ಞ ಡಾ.ರಾಮೇಗೌಡ ಮತ್ತು ಸರಳ ಸಜ್ಜನ ರಾಜಕಾರಣಿ ದಿ. ಸಿಂಗಾರಿಗೌಡ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಏಪ್ರಿಲ್ ೧೨, ೨೦೦೬. ಶಿವರಾಜಕುಮಾರ್ ಅಭಿನಯದ ‘ಕುಮಾರ ರಾಮ; ಚಿತ್ರದ ಚಿತ್ರೀಕರಣ. ಭಾರ್ಗವ ನಿರ್ದೇಶಕರು. ಹಂಪಿಯಲ್ಲಿ…
ನವೀನ್ ಡಿಸೋಜ ಮಡಿಕೇರಿ: ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿ ನಾಲ್ಕನೇ ಸ್ಥಾನದಲ್ಲಿದ್ದ ಕೊಡಗು ಈ ಬಾರಿ ೮ನೇ…