ರಾಜ್ಯ

ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್‌ಗೆ ಬಿಗ್‌ ಟ್ವಿಸ್ಟ್‌

ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್‌ ಆರೋಪ ಮಾಡಿದ್ದ ಮಹಿಳೆ ಈಗ ಉಲ್ಟಾ ಹೊಡೆದಿದ್ದಾರೆ.

ತಮ್ಮ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್‌ ಮಾಡುತ್ತಿದ್ದಾರೆಂದು ಆರೋಪಿಸಿ ಸಂತ್ರಸ್ತ ಮಹಿಳೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಡಾ.ಜಿ.ಪರಮೇಶ್ವರ್‌, ಮಹಿಳಾ ಆಯೋಗ ಮತ್ತು ಮಾನವ ಹಕ್ಕುಗಳ ಆಯೋಗಕ್ಕೂ ದೂರು ಕೊಟ್ಟಿದ್ದರು.

ಇದೀಗ ಉಲ್ಟಾ ಹೊಡೆದಿರುವ ಮಹಿಳೆ, ನಾನು ಯಾರೊಬ್ಬರಿಗೂ ದೂರನ್ನೇ ಕೊಟ್ಟಿಲ್ಲ. ನನ್ನ ಮೇಲೆ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾದವು. ಸ್ವಾಮೀಜಿಯವರ ಮೇಲೆ ನನಗೆ ಅಪಾರವಾದ ಗೌರವವಿದೆ ಎಂದು ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.

ನನ್ನ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಯಾವುದೇ ಲೈಂಗಿಕ ದೌರ್ಜನ್ಯ ಎಸಗಿಲ್ಲ. ಅಲ್ಲದೆ ನಾನು ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತೇನೆಂಬ ಆರೋಪ ಕೇಳಿ ಮನಸ್ಸಿಗೆ ನೋವಾಗಿದೆ. ನಾವು ಹಣ ಕೇಳುವ ದುಸ್ಥಿತಿಗೆ ಬಂದಿಲ್ಲ. ಇದರ ಹಿಂದೆ ಯಾರಿದ್ದಾರೋ ಎಂಬುದು ಗೊತ್ತೂ ಇಲ್ಲ ಎಂದು ವದಂತಿಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

10 hours ago