ರಾಜ್ಯ

ಧರ್ಮಸ್ಥಳ ಕೇಸ್‌ಗೆ ಬಿಗ್‌ ಟ್ವಿಸ್ಟ್:‌ ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮೂಳೆಗಳು ಪತ್ತೆ?

ಧರ್ಮಸ್ಥಳ: ಧರ್ಮಸ್ಥಳದ ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮೂಳೆಗಳು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಂಗ್ಲೆಗುಡ್ಡ ಕಾಡಿನಲ್ಲಿ ಎಸ್‌ಐಟಿ ಶೋಧ ನಡೆಸುವಾಗ ಮೂಳೆಗಳು ಸಿಕ್ಕಿವೆ ಎಂಬ ಮಾಹಿತಿ ಲಭ್ಯವಾಗಿದೆ. ವಿಠಲಗೌಡನನ್ನು ಕರೆತರದೇ ಎಸ್‌ಐಟಿ ಶೋಧ ಕಾರ್ಯ ನಡೆಸುತ್ತಿದ್ದು, ಅಲ್ಲಿ ಸಿಕ್ಕಿರುವ ಮೂಳೆ ಹಾಗೂ ಬಟ್ಟೆಗಳನ್ನು ಎಸ್‌ಐಟಿ ವಶಕ್ಕೆ ಪಡೆದಿದೆ.

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗ್ಲಗುಡ್ಡದಲ್ಲಿ ಮಹಜರು ನಡೆಸಲು ಎಸ್‌ಐಟಿಗೆ ಅರಣ್ಯ ಇಲಾಖೆ ಗ್ರೀನ್‌ ಸಿಗ್ನಲ್‌ ನೀಡಿತ್ತು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ನೇತ್ರಾವತಿ ನದಿ ತೀರದ ಬಂಗ್ಲಗುಡ್ಡ ಪ್ರದೇಶದಲ್ಲಿ ವಿಠಲಗೌಡ ಬುರುಡೆ ತಂದಿರುವ ಜಾಗದಲ್ಲಿ ಎಸ್‌ಐಟಿ ಅಧಿಕಾರಿಗಳು ಇಂದು ಮಹಜರು ನಡೆಸಿದ್ದರು.

ಇದನ್ನು ಓದಿ : ಧರ್ಮಸ್ಥಳ ಕೇಸ್‌: ಬಂಗ್ಲಗುಡ್ಡದಲ್ಲಿ ಮಹಜರಿಗೆ ಎಸ್‌ಐಟಿಗೆ ಅರಣ್ಯ ಇಲಾಖೆ ಗ್ರೀನ್‌ ಸಿಗ್ನಲ್‌

ಧರ್ಮಸ್ಥಳದ ವಿವಿಧೆಡೆ ಹೆಣಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಮುಂದುವರಿಸಿತ್ತು. ಈ ನಡುವೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿತ್ತು.

ಈ ಬೆಳವಣಿಗೆ ನಡುವೆಯೇ ವಿಠಲಗೌಡನ ವಿಡಿಯೋವೊಂದು ವೈರಲ್‌ ಆಗಿದ್ದು, ಬಂಗ್ಲಗುಡ್ಡದಲ್ಲಿ ತಾನು ಹೆಣಗಳ ರಾಶಿ ನೋಡಿದ್ದೇನೆ. ಮೊದಲ ಬಾರಿಗೆ ಸ್ಥಳ ಮಹಜರಿಗೆ ಹೋದಾಗ ಮೂರು ಅಸ್ಥಿಪಂಜರಗಳನ್ನು ನೋಡಿದ್ದೇನೆ. ಎರಡನೇ ಬಾರಿ ಹೋದಾಗ ಬಂಗ್ಲಗುಡ್ಡದಲ್ಲಿ ಮರದ ಕೆಳಭಾಗದಲ್ಲಿ ಹೆಣಗಳ ರಾಶಿ ಕಂಡಿದ್ದೇನೆ. ನನ್ನ ಕಣ್ಣಿಗೆ ಐದು ಅಸ್ಥಿಪಂಜರಗಳು ಕಂಡಿವೆ. ಅದರ ಬಳಿಯೇ ವಾಮಾಚಾರಕ್ಕೆ ಬಳಸುವ ಕೆಲ ವಸ್ತುಗಳು ಕೂಡ ಇದ್ದವು ಎಂದು ಸ್ಪೋಟಕ ಹೇಳಿಕೆ ನೀಡಿದ್ದನು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಬಂಗ್ಲಗುಡ್ಡದಲ್ಲಿ ಮತ್ತೆ ಶೋಧಕಾರ್ಯ ಮುಂದುವರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

11 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago