ರಾಜ್ಯ

ಹನಿಟ್ರ್ಯಾಪ್‌ ಕೇಸ್‌ಗೆ ಬಿಗ್ ಟ್ವಿಸ್ಟ್:‌ ನನ್ನ ಹತ್ಯೆಗೆ ಯತ್ನಿಸಿದ್ರು ಎಂದ ಎಂಎಲ್‌ಸಿ ರಾಜೇಂದ್ರ

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ಟ್ವಿಸ್ಟ್‌ ಸಿಕ್ಕಿದ್ದು, ಹನಿಟ್ರ್ಯಾಪ್‌ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು ಎಂದು ಎಂಎಲ್‌ಸಿ ರಾಜೇಂದ್ರ ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ.

ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿಗೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಡಿಜಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದೇನೆ. ಸಚಿವರು ಕೂಡ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ನನ್ನ ಮೇಲೆ ಹನಿಟ್ರ್ಯಾಪ್‌ ಆಗಿಲ್ಲ. ದೂರವಾಣಿ ಕರೆ ಮೂಲಕ ಯತ್ನ ನಡೆಯುತ್ತಾ ಇತ್ತು ಎಂದರು.

ನವೆಂಬರ್.‌16ರಂದು ಮಗಳ ಹುಟ್ಟುಹಬ್ಬದ ದಿನ ಶಾಮಿಯಾನ ಹಾಕಲು ಸ್ವಲ್ಪ ಜನ ಬಂದಿದ್ದರು. ಆ ವೇಳೆ ನನ್ನನ್ನು ಹತ್ಯೆ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳಿದರು.

ಈ ಬಗ್ಗೆ ನನ್ನ ಆಪ್ತರ ಮೂಲಕ ಆಡಿಯೋ ಸಿಕ್ಕಿತು. ಆಡಿಯೋದಲ್ಲಿ 5 ಲಕ್ಷ ಸುಪಾರಿ ನೀಡಿದ್ರು. ಮೂರು ಜನ ಹತ್ಯೆ ಮಾಡಲು ಪ್ರಯತ್ನಿಸಿದ್ದರು ಎಂದು ಮಾಹಿತಿ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಣ್ಣ ಹನಿಟ್ರ್ಯಾಪ್ ಪ್ರಕರಣ ಸಿಐಡಿಗೆ ಹೋಗಿದೆ. ಪೊಲೀಸರು ರಾಜಣ್ಣ ಮನೆಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ಮನೆ ಕೆಲಸದವರ ಹೇಳಿಕೆಯನ್ನು ಸಹ ಪಡೆದಿದ್ದಾರೆ. ಈ ಪ್ರಕರಣದ ನಾಯಕ ಯಾರು ಎಂದು ಗೊತ್ತಾಗುತ್ತಿಲ್ಲ. ನಾನು ಯಾರ ಹೆಸರನ್ನು ಕೂಡ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

54 mins ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago