ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಹನಿಟ್ರ್ಯಾಪ್ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು ಎಂದು ಎಂಎಲ್ಸಿ ರಾಜೇಂದ್ರ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿಗೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಡಿಜಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದೇನೆ. ಸಚಿವರು ಕೂಡ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ನನ್ನ ಮೇಲೆ ಹನಿಟ್ರ್ಯಾಪ್ ಆಗಿಲ್ಲ. ದೂರವಾಣಿ ಕರೆ ಮೂಲಕ ಯತ್ನ ನಡೆಯುತ್ತಾ ಇತ್ತು ಎಂದರು.
ನವೆಂಬರ್.16ರಂದು ಮಗಳ ಹುಟ್ಟುಹಬ್ಬದ ದಿನ ಶಾಮಿಯಾನ ಹಾಕಲು ಸ್ವಲ್ಪ ಜನ ಬಂದಿದ್ದರು. ಆ ವೇಳೆ ನನ್ನನ್ನು ಹತ್ಯೆ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳಿದರು.
ಈ ಬಗ್ಗೆ ನನ್ನ ಆಪ್ತರ ಮೂಲಕ ಆಡಿಯೋ ಸಿಕ್ಕಿತು. ಆಡಿಯೋದಲ್ಲಿ 5 ಲಕ್ಷ ಸುಪಾರಿ ನೀಡಿದ್ರು. ಮೂರು ಜನ ಹತ್ಯೆ ಮಾಡಲು ಪ್ರಯತ್ನಿಸಿದ್ದರು ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಣ್ಣ ಹನಿಟ್ರ್ಯಾಪ್ ಪ್ರಕರಣ ಸಿಐಡಿಗೆ ಹೋಗಿದೆ. ಪೊಲೀಸರು ರಾಜಣ್ಣ ಮನೆಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ಮನೆ ಕೆಲಸದವರ ಹೇಳಿಕೆಯನ್ನು ಸಹ ಪಡೆದಿದ್ದಾರೆ. ಈ ಪ್ರಕರಣದ ನಾಯಕ ಯಾರು ಎಂದು ಗೊತ್ತಾಗುತ್ತಿಲ್ಲ. ನಾನು ಯಾರ ಹೆಸರನ್ನು ಕೂಡ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…