ಬೆಂಗಳೂರು : ಹುಲಿ ಉಗುರು ಧರಿಸಿದ್ದ ಆರೋಪದಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ಬಿಗ್ ಬಾಸ್’ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ವರ್ತೂರು ಸಂತೋಷ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ರಾತ್ರಿ ಬಂಧಿಸಿದ್ದು, ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಪ್ರತಿಕ್ರಿಯಿಸಿದ್ದಾರೆ.
ʼʼಬಿಗ್ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಎಂಬವರು ಕೊರಳಲ್ಲಿ ಹುಲಿಯ ಉಗುರು ಹಾಕಿಕೊಂಡಿದ್ದಾರೆ ಎಂಬ ಆ ದೂರಿನ ಆಧಾರದ ಮೇಲೆ ನಮ್ಮ ಅರಣ್ಯ ಇಲಾಖೆ ಅಧಿಕಾರಿಗಳು ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವನ್ಯ ಜೀವಿಗಳ ಕಾನೂನಿನ ಆಧಾರದ ಮೇಲೆ ಬಂಧನ ಮಾಡಲಾಗಿದೆ. ಇದರಲ್ಲಿ ಯಾರೇ ಇದ್ದರೂ ಕಾನೂನು ರೀತಿ ಕ್ರಮ ಜರುಗಿಸಲಾಗುವುದುʼʼ ಎಂದು ಅವರು ಹೇಳಿದರು.
ʼʼವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ನನಗೆ ಇದರ ಬಗ್ಗೆ ನಿನ್ನೆ ನಮ್ಮ ಅಧಿಕಾರಿಗಳು ದೂರವಾಣಿ ಮೂಲಕ ಮಾಹಿತಿ ಕೊಟ್ಟಿದಾರೆ. ತನಿಖೆ ನಡೆಸಿ ಹುಲಿಯ ಉಗುರು ಎಂದು ಗುರುತಿಸಿದ ಮೇಲೆ ಕಾನೂನು ರೀತಿ ಕ್ರಮ ಜರುಗಿಸುತ್ತಾರೆʼʼ ಎಂದು ಅವರು ತಿಳಿಸಿದರು.
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…