ಬೆಂಗಳೂರು: ಕೊಡಿಗೆಹಳ್ಳಿ ಗಲಾಟೆ ಪ್ರಕರಣ ಸಂಬಂಧ ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಹಾಗೂ ಗನ್ಮ್ಯಾನ್ನನ್ನು ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ ದೂರಿನ ಮೇರೆಗೆ ಲಾಯರ್ ಜಗದೀಶ್ ಹಾಗೂ ಗನ್ಮ್ಯಾನ್ನನ್ನು ಬಂಧಿಸಲಾಗಿದೆ.
ಗಲಾಟೆಯಲ್ಲಿ ಲಾಯರ್ ಜಗದೀಶ್ ಗಾಯಗೊಂಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಲೈವ್ಬಂದು ಮಾತನಾಡಿದ್ದರು. ಚಿಕಿತ್ಸೆ ಬಳಿಕ ಅವರ ಮಗ ಆರ್ಯನ್ ನನ್ನು ಸಹ ಬಂಧಿಸಲಾಗಿದೆ.
ಇಂದು ಲಾಯರ್ ಜಗದೀಶ್ ಅವರನ್ನು ನ್ಯಾಯಾಲಯದ ಮುಂದೆ ಪೊಲೀಸರು ಹಾಜರು ಪಡಿಸಲಿದ್ದಾರೆ. ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ಅಣ್ಣಮ್ಮ ದೇವಿಯ ಉತ್ಸವದ ವಿಚಾರವಾಗಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಹಾಗೂ ಸ್ಥಳೀಯರ ಮಧ್ಯೆ ಮಾರಾಮಾರಿಯಾಗಿತ್ತು.
ಈ ವೇಳೆ ಕಾನೂನು ಬಾಹಿರವಾಗಿ ಫೈರ್ ಮಾಡಿದ ಆರೋಪದ ಮೇರೆಗೆ ಬಂಧಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಬಳಸಲು ಮಾತ್ರ ಗನ್ ಲೈಸೆನ್ಸ್ ಪಡೆದಿದ್ದರು. ಆದರೆ ಗಲಾಟೆ ವೇಳೆ ಕಾನೂನು ಬಾಹಿರವಾಗಿ ಫೈರ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…