ರಾಜ್ಯ

ಎರಡೇ ವಾರಕ್ಕೆ ಬಂದ್‌ ಆಯ್ತು ಬಿಗ್‌ ಬಾಸ್‌ ಹೌಸ್‌

ಬೆಂಗಳೂರು: ಕನ್ನಡ ಬಿಗ್‌ಬಾಸ್‌ ಸೀಜನ್‌ 12ಕ್ಕೆ ಸಂಕಷ್ಟ ಎದುರಾಗಿದೆ.

ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್‌ ಶುರುವಾದ ಎರಡನೇ ವಾರಕ್ಕೆ ಬಿಗ್‌ಬಾಸ್‌ ಬಂದ್‌ ಆಗಿದೆ. ಬಿಗ್‌ಬಾಸ್‌ ಶೋ ನಡೆಯುತ್ತಿದ್ದ ಜಾಲಿವುಡ್‌ ಸ್ಟುಡಿಯೋಗೆ ಬೀಗಮುದ್ರೆ ಹಾಕಲಾಗಿದೆ.

ರಾಮನಗರದ ಬಿಡದಿ ಬಳಿಯ 35 ಎಕರೆ ಪ್ರದೇಶದಲ್ಲಿರುವ ಜಾಲಿವುಡ್‌ ಸ್ಟುಡಿಯೋದಲ್ಲಿ ಪ್ರತ್ಯೇಕ ಸೆಟ್‌ಗಳನ್ನು ಹಾಕಿ ಕನ್ನಡ ಬಿಗ್‌ಬಾಸ್‌ ಸೀಜನ್‌ 12ನ್ನು ನಡೆಸಲಾಗುತ್ತಿತ್ತು. ಆದರೆ ಬಿಗ್‌ಬಾಸ್‌ ಶೋ ಹಾಗೂ ಸೆಟ್‌ಗಳಲ್ಲಿ ಪರಿಸರ ನಿಯಮ ಉಲ್ಲಂಘನೆ ಮಾಡಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್‌ ಜಾರಿ ಮಾಡಿತ್ತು.

ಅಲ್ಲದೇ ಜಾಲಿವುಡ್‌ ಸ್ಟುಡಿಯೋವಾಗಲಿ, ಬಿಗ್‌ಬಾಸ್‌ ಶೋ ತಂಡವಾಗಲಿ ಶೋ ನಡೆಸಲು ಇಲ್ಲಿ ಪೊಲೀಸರಿಂದ ಯಾವುದೇ ಅನುಮತಿ ಪಡೆದಿಲ್ಲ.

ಈ ಹಿನ್ನೆಲೆಯಲ್ಲಿ ಬಿಗ್‌ ಬಾಸ್‌ ಶೋ ಸ್ಥಗಿತಗೊಳಿಸುವಂತೆ ಪೊಲೀಸರು ಕೂಡ ನೋಟಿಸ್‌ ಜಾರಿ ಮಾಡಿದ್ದರು.

ಇದನ್ನೂ ಓದಿ:-ಸಚಿವ ಸಂಪುಟ ವಿಸ್ತರಣೆಯಾಗಲಿದೆ, ನನಗೂ ಸಚಿವ ಸ್ಥಾನ ಸಿಗಲಿದೆ: ಶಾಸಕ ಪ್ರದೀಪ್‌ ಈಶ್ವರ್‌

ಈ ಹಿನ್ನೆಲೆಯಲ್ಲಿ ಬಿಡದಿ ತಹಶಿಲ್ದಾರ್‌, ಪೊಲೀಸ್‌ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಜಾಲಿವುಡ್‌ ಸ್ಟುಡಿಯೋಗೆ ಬೀಗ ಮುದ್ರೆ ಹಾಕಿದ್ದಾರೆ.

ಬಿಗ್‌ ಬಾಸ್‌ ಶೋ ಹೌಸ್‌ಗೂ ಬೀಗ ಜಡಿಯಲಾಗಿದ್ದು, ಬಿಗ್‌ಬಾಸ್‌ ಶೋ ಬಂದ್‌ ಆಗಿದೆ.

ಬಿಗ್‌ಬಾಸ್‌ ಸ್ಫರ್ಧಿಗಳನ್ನು ಸ್ಥಳದಿಂದ ಹೊರಗೆ ಕಳುಹಿಸಲಾಗಿದೆ. ಅಧಿಕಾರಿಗಳ ಸಮ್ಮುಖದಲ್ಲಿಯೇ ಜಾಲಿವುಡ್‌ ಸ್ಟುಡಿಯೋಗೆ ಬೀಗ ಹಾಕಲಾಗಿದ್ದು, ಸದ್ಯ ಬಿಗ್‌ ಬಾಸ್‌ ಕಾರ್ಯಕ್ರಮ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

6 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

6 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

9 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

9 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

10 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

10 hours ago