ಬೆಂಗಳೂರು: ಕನ್ನಡ ಬಿಗ್ಬಾಸ್ ಸೀಜನ್ 12ಕ್ಕೆ ಸಂಕಷ್ಟ ಎದುರಾಗಿದೆ.
ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ ಶುರುವಾದ ಎರಡನೇ ವಾರಕ್ಕೆ ಬಿಗ್ಬಾಸ್ ಬಂದ್ ಆಗಿದೆ. ಬಿಗ್ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಬೀಗಮುದ್ರೆ ಹಾಕಲಾಗಿದೆ.
ರಾಮನಗರದ ಬಿಡದಿ ಬಳಿಯ 35 ಎಕರೆ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ಪ್ರತ್ಯೇಕ ಸೆಟ್ಗಳನ್ನು ಹಾಕಿ ಕನ್ನಡ ಬಿಗ್ಬಾಸ್ ಸೀಜನ್ 12ನ್ನು ನಡೆಸಲಾಗುತ್ತಿತ್ತು. ಆದರೆ ಬಿಗ್ಬಾಸ್ ಶೋ ಹಾಗೂ ಸೆಟ್ಗಳಲ್ಲಿ ಪರಿಸರ ನಿಯಮ ಉಲ್ಲಂಘನೆ ಮಾಡಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿತ್ತು.
ಅಲ್ಲದೇ ಜಾಲಿವುಡ್ ಸ್ಟುಡಿಯೋವಾಗಲಿ, ಬಿಗ್ಬಾಸ್ ಶೋ ತಂಡವಾಗಲಿ ಶೋ ನಡೆಸಲು ಇಲ್ಲಿ ಪೊಲೀಸರಿಂದ ಯಾವುದೇ ಅನುಮತಿ ಪಡೆದಿಲ್ಲ.
ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ಶೋ ಸ್ಥಗಿತಗೊಳಿಸುವಂತೆ ಪೊಲೀಸರು ಕೂಡ ನೋಟಿಸ್ ಜಾರಿ ಮಾಡಿದ್ದರು.
ಇದನ್ನೂ ಓದಿ:-ಸಚಿವ ಸಂಪುಟ ವಿಸ್ತರಣೆಯಾಗಲಿದೆ, ನನಗೂ ಸಚಿವ ಸ್ಥಾನ ಸಿಗಲಿದೆ: ಶಾಸಕ ಪ್ರದೀಪ್ ಈಶ್ವರ್
ಈ ಹಿನ್ನೆಲೆಯಲ್ಲಿ ಬಿಡದಿ ತಹಶಿಲ್ದಾರ್, ಪೊಲೀಸ್ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಜಾಲಿವುಡ್ ಸ್ಟುಡಿಯೋಗೆ ಬೀಗ ಮುದ್ರೆ ಹಾಕಿದ್ದಾರೆ.
ಬಿಗ್ ಬಾಸ್ ಶೋ ಹೌಸ್ಗೂ ಬೀಗ ಜಡಿಯಲಾಗಿದ್ದು, ಬಿಗ್ಬಾಸ್ ಶೋ ಬಂದ್ ಆಗಿದೆ.
ಬಿಗ್ಬಾಸ್ ಸ್ಫರ್ಧಿಗಳನ್ನು ಸ್ಥಳದಿಂದ ಹೊರಗೆ ಕಳುಹಿಸಲಾಗಿದೆ. ಅಧಿಕಾರಿಗಳ ಸಮ್ಮುಖದಲ್ಲಿಯೇ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಲಾಗಿದ್ದು, ಸದ್ಯ ಬಿಗ್ ಬಾಸ್ ಕಾರ್ಯಕ್ರಮ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…