ರಾಜ್ಯ

ಲಾಂಗ್‌ ಹಿಡಿದು ರೀಲ್ಸ್‌ ಪ್ರಕರಣ: ರಜತ್‌ಗೆ ಮತ್ತೆ ನೋಟಿಸ್‌ ನೀಡಿದ ಪೊಲೀಸರು

ಬೆಂಗಳೂರು: ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ.

ಕಳೆದ ಒಂದು ತಿಂಗಳ ಹಿಂದೆ ರಜತ್‌ ಹಾಗೂ ವಿನಯ್‌ ಗೌಡ ಮಚ್ಚು ಹಿಡಿದು ನಟ ದರ್ಶನ್‌ ಸಿನಿಮಾ ಹಾಡಿಗೆ ರೀಲ್ಸ್‌ ಮಾಡಿದ್ದರು.

ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗುತ್ತಿದ್ದಂತೆ ಬಸವೇಶ್ವರ ನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದರು.

ಆದರೆ ಇಲ್ಲಿಯವರೆಗೂ ರೀಲ್ಸ್‌ಗೆ ಬಳಸಿದ ಅಸಲಿ ಮಚ್ಚನ್ನು ಪೊಲೀಸರಿಗೆ ಕೊಟ್ಟಿರಲಿಲ್ಲ. ಹಾಗಾಗಿ ಆ ಮಚ್ಚಿನ ಬಗ್ಗೆ ಮಾಹಿತಿ ನೀಡುವಂತೆ ರಜತ್‌ಗೆ ನೋಟಿಸ್‌ ನೀಡಿದ್ದು, ವಿಚಾರಣೆಗೆ ಬರಲು ಸೂಚನೆ ನೀಡಲಾಗಿದೆ.

ಇನ್ನು ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ್ದ ಕೇಸ್‌ನಲ್ಲಿ ಮಾರ್ಚ್.‌24ರಂದು ಅರೆಸ್ಟ್‌ ಆಗಿದ್ದ ರಜತ್‌ ಹಾಗೂ ವಿನಯ್‌ ಗೌಡ ಮಾರ್ಚ್.28ರಂದು ಷರತ್ತುಬದ್ಧ ಜಾಮೀನಿನ ಮೇಳೆ ಬಿಡುಗಡೆಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

32 mins ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

35 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

38 mins ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

40 mins ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

49 mins ago