ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಬೀಗ ಬಿದ್ದಿದೆ. ಈ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹಳೇ ಹೇಳಿಕೆ ಬಗ್ಗೆ ಚರ್ಚೆ ಶುರುವಾಗಿದೆ.
ಕನ್ನಡ ಚಿತ್ರರಂಗದ ನಟ್ಟು ಬೋಲ್ಟು ಟೈಟ್ ಮಾಡುವ ಬಗ್ಗೆ ಡಿಕೆ ಶಿವಕುಮಾರ್ ಅವರು ಈ ಮೊದಲು ನೀಡಿದ್ದ ಹೇಳಿಕೆಯನ್ನು ಈಗ ಕೆಲವರು ನೆನಪಿಸಿಕೊಂಡಿದ್ದಾರೆ. ಜೆಡಿಎಸ್ ಕೂಡ ಇದೇ ಆರೋಪ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: ಮಹಾಪಂಚ್ ಕಾರ್ಟೂನ್
ಕುಮಾರಸ್ವಾಮಿ ಮತ್ತು ಜೆಡಿಎಸ್ನವರು ಬರೀ ರಾಜಕೀಯ ಮಾಡುತ್ತಿದ್ದಾರೆ. ಕುಮಾರಸ್ವಾಮಿಯಾದರೂ ಟ್ವೀಟ್ ಮಾಡಲಿ, ಮೇಲಿನವರಾದರೂ ಟ್ವೀಟ್ ಮಾಡಲಿ. ಅದಕ್ಕೆ ನಾನು ತಲೆ ಕೆಡಿಸಿಕೊಳ್ಳಲ್ಲ. ನಾನು ವಿಚಾರಿಸಿದ್ದೇನೆ. ಮಾಲಿನ್ಯ ನಿಯಂತ್ರಣ ಮಂಡಳಿಯವರು ಇದನ್ನು ಮಾಡಿದ್ದಾರೆ. ಆದರೂ ಕೂಡ ನಾನು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಉದ್ಯೋಗಾವಕಾಶ ತುಂಬ ಮುಖ್ಯ. ಸಮಸ್ಯೆ ನಿವಾರಣೆಗೆ ಒಂದು ಅವಕಾಶ ನೀಡಲು ಸೂಚಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
‘ನಮ್ಮಲ್ಲಿ ಮನರಂಜನೆ ಆಗಬೇಕು. ನಾನೇ ಅದನ್ನು ಉದ್ಘಾಟನೆ ಮಾಡಿದ್ದು. ನನ್ನ ಬಗ್ಗೆ ಮಾತನಾಡಲಿಲ್ಲ ಎಂದರೆ ಜೆಡಿಎಸ್ ಪಕ್ಷದವರಿಗೆ ನೆಮ್ಮದಿಯೇ ಇಲ್ಲ, ನಿದ್ರೆ ಬರಲ್ಲ. ಅವರಿಗೆ ಯಾವುದಕ್ಕೂ ಶಕ್ತಿ ಬರಲ್ಲ. ನಮ್ಮ ಸರ್ಕಾರದವರು ತಮ್ಮ ಕರ್ತವ್ಯ ಮಾಡಿರುವುದು ನನಗೆ ಗೊತ್ತಿರಲಿಲ್ಲ. ಫೋನ್ ಮಾಡಿ ಡಿಸಿ ಮತ್ತು ಎಸ್ಪಿ ಅವರಿಗೆ ಹೇಳಿದ್ದೇನೆ. ತಪ್ಪಾಗಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಬೇಕು ಅಂತ ಹೇಳಿದ್ದೇನೆ’ ಎಂದಿದ್ದಾರೆ ಡಿಕೆ ಶಿವಕುಮಾರ್.
ತಪ್ಪು ಸರಿಪಡಿಸಿಕೊಳ್ಳಲು ಜಾಲಿವುಡ್ ಸ್ಟುಡಿಯೋದವರು ಡಿಸಿ ಬಳಿ ಸಮಯಾವಕಾಶ ಕೋರಿದ್ದಾರೆ. ಆ ಮನವಿಯನ್ನು ಜಿಲ್ಲಾಡಳಿತವು ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಳಿಸಿದೆ. ಒಂದು ವೇಳೆ ಅನುಮತಿ ಸಿಕ್ಕರೆ ಕೂಡಲೇ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ಆರಂಭ ಆಗಲಿದೆ. ಅನುಮತಿ ಸಿಗುವುದು ತಡವಾದರೆ ಇನ್ನಷ್ಟು ದಿನಗಳ ಕಾಲ ಕಾಯುವುದು ಅನಿವಾರ್ಯ ಆಗುತ್ತದೆ. ಸದ್ಯಕ್ಕೆ ಬಿಗ್ ಬಾಸ್ ಸ್ಪರ್ಧಿಗಳನ್ನು ರೆಸಾರ್ಟ್ನಲ್ಲಿ ಇರಿಸಲಾಗಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…