ರಾಜ್ಯ

ದೇಶದ ಅತಿ ದೊಡ್ಡ ಚಿರತೆ ಸಫಾರಿಗೆ ಅರಣ್ಯ ಸಚಿವರಿಂದ ಚಾಲನೆ

ಬನ್ನೇರುಘಟ್ಟ : ಹುಲಿ ಸಫಾರಿ, ಸಸ್ಯಹಾರಿ ಪ್ರಾಣಿಗಳ ಸಫಾರಿ, ಸಿಂಹ ಸಫಾರಿ, ಕರಡಿ ಸಫಾರಿ ಇರುವ ಬನ್ನೇರುಘಟ್ಟ ಉದ್ಯಾನದಲ್ಲಿ ನೂತನವಾಗಿ ನಿರ್ಮಿಸಿರುವ ಚಿರತೆ ಸಫಾರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಇಂದು ಚಾಲನೆ ನೀಡಿದರು.

ಬಳಿಕ ಸಫಾರಿ ಕೇಂದ್ರದ ಕುರಿತು ಮಾಹಿತಿ ನೀಡಿದ ಸಚಿವರು, ಇದು ದಕ್ಷಿಣ ಭಾರತದ ಪ್ರಥಮ ಮತ್ತು ದೇಶದಲ್ಲಿಯೇ ಅತಿ ದೊಡ್ಡ ಚಿರತೆ ಸಫಾರಿ ಆಗಿದೆ. ಪ್ರಸ್ತುತ 8 ಚಿರತೆಗಳನ್ನು ತೆರೆದ ವನ ಪ್ರದೇಶದಲ್ಲಿ ಸಫಾರಿಗೆ ಬಿಡಲಾಗಿದೆ. ಇದು ಈ ಉದ್ಯಾನದ ಮತ್ತೊಂದು ಆಕರ್ಷಣೆಯಾಗಿದ್ದು, ಪ್ರವಾಸಿಗರು ಮತ್ತು ಸಂದರ್ಶಕರನ್ನು ಸೆಳೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಅಲ್ಲದೆ ಈ ಚಿರತೆ ಸಫಾರಿ ಪ್ರದೇಶವು ನೈಸರ್ಗಿಕ ಬಂಡೆಗಳಿಂದ ಹಾಗೂ ಅರೆ-ಎಲೆ ಉದುರುವ ಕಾಡುಗಳಿಂದ ಕೂಡಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರದ ಮಾರ್ಗಸೂಚಿಗಳ ಪ್ರಕಾರ, 20 ಹೆಕ್ಟೇರ್ ಪ್ರದೇಶವನ್ನು ಗುರುತಿಸಿ ರೈಲ್ವೆ ಬ್ಯಾರಿಕೇಡ್ ಹಾಕಲಾಗಿದೆ. ಒಟ್ಟು 4.5 ಕೋಟಿ ರೂ. ವೆಚ್ಚದಲ್ಲಿ ಸುರಕ್ಷಿತ ವಿನ್ಯಾಸ ರೂಪಿಸಲಾಗಿದೆ. ಈ ಇಡೀ ಪ್ರದೇಶಕ್ಕೆ 4.5 ಮೀಟರ್ ಎತ್ತರದ ಲಂಬ ಚೈನ್ ಲಿಂಕ್ ಜಾಲರಿ ಅಳವಡಿಸಲಾಗಿದ್ದು, ಎಂಎಸ್ ಶೀಟ್ ಗಳನ್ನು 1.5 ಮೀಟರ್ ಎತ್ತರವಿರುವ 30ಡಿಗ್ರಿ ಇಳಿಜಾರಿನ ಕೋನದಲ್ಲಿ ಹಾಕುವ ಮೂಲಕ ಚಿರತೆಗಳು ಹೊರಗೆ ಬಾರದಂತೆ ಎಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.

ಇನ್ನು ಉದ್ಯಾನವನ ಸುತ್ತ ಮುತ್ತ ಬೆಟ್ಟಗುಡ್ಡಗಳಿದ್ದು, ಇದು ಚಿರತೆಗಳು ವಾಸಿಸಲು ಉತ್ತಮ ತಾಣವಾಗಿದೆ. ಹೀಗಾಗಿಯೇ ಇಲ್ಲಿ ಹೆಚ್ಚಿನ ಸಂಖ್ಯೆ ಚಿರತೆಗಳೂ ಇವೆ. ಈ ಪೈಕಿ ಹೊಲ, ಗದ್ದೆಗಳಲ್ಲಿ ಹೆಣ್ಣು ಚಿರತೆಗಳು ಮರಿ ಹಾಕಿ ಹೋಗುವ ಸಂದರ್ಭದಲ್ಲಿ ಅಂತಹ ಮರಿಗಳನ್ನು ತಂದು ಉದ್ಯಾನದಲ್ಲಿ ಪಾಲನೆ ಮಾಡಲಾಗುತ್ತದೆ. ಪ್ರಸ್ತುತ ಉದ್ಯಾನದಲ್ಲಿ 14 ಚಿರತೆಗಳಿವೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ. ಸುನೀಲ್ ಪನ್ವಾರ್, ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯ ನಿರ್ವಾಹಕ ನಿರ್ದೇಶಕ ಎ.ವಿ. ಸೂರ್ಯಸೇನ್ ಮತ್ತಿತರರು ಉಪಸ್ಥಿತರಿದ್ದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

3 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

3 hours ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

3 hours ago

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

13 hours ago