ರಾಜ್ಯ

ದೇಶದ ಅತಿ ದೊಡ್ಡ ಚಿರತೆ ಸಫಾರಿಗೆ ಅರಣ್ಯ ಸಚಿವರಿಂದ ಚಾಲನೆ

ಬನ್ನೇರುಘಟ್ಟ : ಹುಲಿ ಸಫಾರಿ, ಸಸ್ಯಹಾರಿ ಪ್ರಾಣಿಗಳ ಸಫಾರಿ, ಸಿಂಹ ಸಫಾರಿ, ಕರಡಿ ಸಫಾರಿ ಇರುವ ಬನ್ನೇರುಘಟ್ಟ ಉದ್ಯಾನದಲ್ಲಿ ನೂತನವಾಗಿ ನಿರ್ಮಿಸಿರುವ ಚಿರತೆ ಸಫಾರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಇಂದು ಚಾಲನೆ ನೀಡಿದರು.

ಬಳಿಕ ಸಫಾರಿ ಕೇಂದ್ರದ ಕುರಿತು ಮಾಹಿತಿ ನೀಡಿದ ಸಚಿವರು, ಇದು ದಕ್ಷಿಣ ಭಾರತದ ಪ್ರಥಮ ಮತ್ತು ದೇಶದಲ್ಲಿಯೇ ಅತಿ ದೊಡ್ಡ ಚಿರತೆ ಸಫಾರಿ ಆಗಿದೆ. ಪ್ರಸ್ತುತ 8 ಚಿರತೆಗಳನ್ನು ತೆರೆದ ವನ ಪ್ರದೇಶದಲ್ಲಿ ಸಫಾರಿಗೆ ಬಿಡಲಾಗಿದೆ. ಇದು ಈ ಉದ್ಯಾನದ ಮತ್ತೊಂದು ಆಕರ್ಷಣೆಯಾಗಿದ್ದು, ಪ್ರವಾಸಿಗರು ಮತ್ತು ಸಂದರ್ಶಕರನ್ನು ಸೆಳೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಅಲ್ಲದೆ ಈ ಚಿರತೆ ಸಫಾರಿ ಪ್ರದೇಶವು ನೈಸರ್ಗಿಕ ಬಂಡೆಗಳಿಂದ ಹಾಗೂ ಅರೆ-ಎಲೆ ಉದುರುವ ಕಾಡುಗಳಿಂದ ಕೂಡಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರದ ಮಾರ್ಗಸೂಚಿಗಳ ಪ್ರಕಾರ, 20 ಹೆಕ್ಟೇರ್ ಪ್ರದೇಶವನ್ನು ಗುರುತಿಸಿ ರೈಲ್ವೆ ಬ್ಯಾರಿಕೇಡ್ ಹಾಕಲಾಗಿದೆ. ಒಟ್ಟು 4.5 ಕೋಟಿ ರೂ. ವೆಚ್ಚದಲ್ಲಿ ಸುರಕ್ಷಿತ ವಿನ್ಯಾಸ ರೂಪಿಸಲಾಗಿದೆ. ಈ ಇಡೀ ಪ್ರದೇಶಕ್ಕೆ 4.5 ಮೀಟರ್ ಎತ್ತರದ ಲಂಬ ಚೈನ್ ಲಿಂಕ್ ಜಾಲರಿ ಅಳವಡಿಸಲಾಗಿದ್ದು, ಎಂಎಸ್ ಶೀಟ್ ಗಳನ್ನು 1.5 ಮೀಟರ್ ಎತ್ತರವಿರುವ 30ಡಿಗ್ರಿ ಇಳಿಜಾರಿನ ಕೋನದಲ್ಲಿ ಹಾಕುವ ಮೂಲಕ ಚಿರತೆಗಳು ಹೊರಗೆ ಬಾರದಂತೆ ಎಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.

ಇನ್ನು ಉದ್ಯಾನವನ ಸುತ್ತ ಮುತ್ತ ಬೆಟ್ಟಗುಡ್ಡಗಳಿದ್ದು, ಇದು ಚಿರತೆಗಳು ವಾಸಿಸಲು ಉತ್ತಮ ತಾಣವಾಗಿದೆ. ಹೀಗಾಗಿಯೇ ಇಲ್ಲಿ ಹೆಚ್ಚಿನ ಸಂಖ್ಯೆ ಚಿರತೆಗಳೂ ಇವೆ. ಈ ಪೈಕಿ ಹೊಲ, ಗದ್ದೆಗಳಲ್ಲಿ ಹೆಣ್ಣು ಚಿರತೆಗಳು ಮರಿ ಹಾಕಿ ಹೋಗುವ ಸಂದರ್ಭದಲ್ಲಿ ಅಂತಹ ಮರಿಗಳನ್ನು ತಂದು ಉದ್ಯಾನದಲ್ಲಿ ಪಾಲನೆ ಮಾಡಲಾಗುತ್ತದೆ. ಪ್ರಸ್ತುತ ಉದ್ಯಾನದಲ್ಲಿ 14 ಚಿರತೆಗಳಿವೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ. ಸುನೀಲ್ ಪನ್ವಾರ್, ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯ ನಿರ್ವಾಹಕ ನಿರ್ದೇಶಕ ಎ.ವಿ. ಸೂರ್ಯಸೇನ್ ಮತ್ತಿತರರು ಉಪಸ್ಥಿತರಿದ್ದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

2 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

2 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

2 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

2 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

2 hours ago