Mysore
26
scattered clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

ದೇಶದಲ್ಲಿ ಅತ್ಯಂತ ಭ್ರಷ್ಟ ರಾಜ್ಯ ಬಿಹಾರ: ಸಚಿವ ಸಂತೋಷ್‌ ಲಾಡ್‌

Santosh lad

ಬೆಂಗಳೂರು: ಚುನಾವಣೆ ಬಂದಾಗ ಬಿಜೆಪಿಯವರು ನಮ್ಮ ಗ್ಯಾರಂಟಿ ಕಾರ್ಯಕ್ರಮಗಳನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 25 ವರ್ಷದಿಂದ ಬಿಹಾರದಲ್ಲಿ ಬಿಜೆಪಿಯ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ. ದೇಶದಲ್ಲಿ ಅತ್ಯಂತ ಭ್ರಷ್ಟ ರಾಜ್ಯ ಬಿಹಾರವಾಗಿದೆ ಎಂದು ಟೀಕಿಸಿದರು.

ಜಿಎಸ್‍ಟಿ ಸಂಗ್ರಹ ಪ್ರಮಾಣ ಅತ್ಯಂತ ಕಡಿಮೆ ಪ್ರಮಾಣವಿದ್ದು, ಶಿಕ್ಷಣ, ಕೈಗಾರಿಕೆಯಲ್ಲೂ ಹಿಂದುಳಿದಿದೆ. ದಕ್ಷಿಣ ರಾಜ್ಯಗಳಿಗೆ ಬಿಜೆಪಿ ಆಡಳಿತವಿರುವ ಯಾವುದೇ ರಾಜ್ಯವನ್ನು ಹೋಲಿಕೆ ಮಾಡಲು ಸಾಧ್ಯವಿಲ್ಲ. ನಮ್ಮ ಪಾಲಿನ ಜಿಎಸ್‍ಟಿ ಹಣವು ಅಲ್ಲಿಗೆ ಹೋಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇಷ್ಟೆಲ್ಲಾ ಹಣ ಹೋದರೂ 15 ಸೇತುವೆಗಳು ಕುಸಿದುಬಿದ್ದಿವೆ. ಇದುವರೆಗೂ ಬಿಹಾರ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಆಧಾರ್‌ ಕಾರ್ಡ್ ಅನ್ನು ವಿರೋಧಿಸಿತ್ತು. ನರೇಗ ಹಾಗೂ 5 ಗ್ಯಾರಂಟಿಗಳ ವಿರುದ್ಧ ಮಾತನಾಡುತ್ತಿದ್ದರು. ಈಗ ಅವರೇ ಘೋಷಣೆ ಮಾಡಿದ್ದಾರೆ ಎಂದು ಬಿಹಾರದಲ್ಲಿ ಉಚಿತ ವಿದ್ಯುತ್ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿದರು.

Tags:
error: Content is protected !!