Santosh lad
ಬೆಂಗಳೂರು: ಚುನಾವಣೆ ಬಂದಾಗ ಬಿಜೆಪಿಯವರು ನಮ್ಮ ಗ್ಯಾರಂಟಿ ಕಾರ್ಯಕ್ರಮಗಳನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 25 ವರ್ಷದಿಂದ ಬಿಹಾರದಲ್ಲಿ ಬಿಜೆಪಿಯ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ. ದೇಶದಲ್ಲಿ ಅತ್ಯಂತ ಭ್ರಷ್ಟ ರಾಜ್ಯ ಬಿಹಾರವಾಗಿದೆ ಎಂದು ಟೀಕಿಸಿದರು.
ಜಿಎಸ್ಟಿ ಸಂಗ್ರಹ ಪ್ರಮಾಣ ಅತ್ಯಂತ ಕಡಿಮೆ ಪ್ರಮಾಣವಿದ್ದು, ಶಿಕ್ಷಣ, ಕೈಗಾರಿಕೆಯಲ್ಲೂ ಹಿಂದುಳಿದಿದೆ. ದಕ್ಷಿಣ ರಾಜ್ಯಗಳಿಗೆ ಬಿಜೆಪಿ ಆಡಳಿತವಿರುವ ಯಾವುದೇ ರಾಜ್ಯವನ್ನು ಹೋಲಿಕೆ ಮಾಡಲು ಸಾಧ್ಯವಿಲ್ಲ. ನಮ್ಮ ಪಾಲಿನ ಜಿಎಸ್ಟಿ ಹಣವು ಅಲ್ಲಿಗೆ ಹೋಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಇಷ್ಟೆಲ್ಲಾ ಹಣ ಹೋದರೂ 15 ಸೇತುವೆಗಳು ಕುಸಿದುಬಿದ್ದಿವೆ. ಇದುವರೆಗೂ ಬಿಹಾರ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಆಧಾರ್ ಕಾರ್ಡ್ ಅನ್ನು ವಿರೋಧಿಸಿತ್ತು. ನರೇಗ ಹಾಗೂ 5 ಗ್ಯಾರಂಟಿಗಳ ವಿರುದ್ಧ ಮಾತನಾಡುತ್ತಿದ್ದರು. ಈಗ ಅವರೇ ಘೋಷಣೆ ಮಾಡಿದ್ದಾರೆ ಎಂದು ಬಿಹಾರದಲ್ಲಿ ಉಚಿತ ವಿದ್ಯುತ್ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿದರು.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…