ಬೆಂಗಳೂರು: ಬೈಕ್ನ ಹಿಂಬದಿ ಸವಾರನ ಸಾವಿಗೆ ಬೈಕ್ ಮಾಲಕನೇ ಪರಿಹಾರ ಪಾವತಿಸಬೇಕು. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಹಿಂಬದಿ ಸವಾರ ಮೂರನೇ ವ್ಯಕ್ತಿ(ಥರ್ಡ್ ಪಾರ್ಟಿ) ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
ಇದೇ ವೇಳೆ ತುಮಕೂರಿನ ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣ ಇನ್ಸೂರೆನ್ಸ್ ಕಂಪೆನಿಗೆ ಪರಿಹಾರ ಪಾವತಿಸಲು ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಅಲ್ಲದೇ, ಜಿ, ನ್ಯಾಯಮಂಡಳಿ ನಿಗದಿಪಡಿಸಿದ ಪರಿಹಾರ ಮೊತ್ತವನ್ನು ಮೃತನ ಕುಟುಂಬಸ್ಥರಿಗೆ ನೀಡುವಂತೆ ವಾಹನದ(ಹೀರೋ ಹೋಂಡಾ ಬೈಕ್) ಮಾಲೀಕ ನಿಸಾಮುದ್ದೀನ್ ಅವರಿಗೆ ಹೈಕೋರ್ಟ್ ಆದೇಶಿಸಿದೆ.
ವಾಹನದ ಆಸನದ ಸಾಮಥ್ಯವು 1+1 ಆಗಿದ್ದು, ಅದರ ಆಧಾರದ ಮೇಲೆ ನ್ಯಾಯಮಂಡಳಿಯು ವಿಮಾ ಕಂಪೆನಿಯ ಮೇಲೆ ಪರಿಹಾರ ನೀಡುವ ಹೊಣೆಗಾರಿಕೆಯನ್ನು ನಿಗದಿಪಡಿಸಿದೆ, ನ್ಯಾಯಾಧಿಕರಣದ ಆದೇಶ ಸೂಕ್ತವಾಗಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಹಾಗೆಯೇ ಪರಿಹಾರ ಪಾವತಿಸುವ ಹೊಣೆಯನ್ನು ಬೈಕ್ ಮಾಲೀಕನಿಗೆ ವರ್ಗಾಯಿಸಿದೆ.
ಪ್ರಕರಣವೇನು?: 2011ರ ಮಾ.24ರಂದು ಮೃತ ಸಿದ್ದಿಕ್ ಉಲ್ಲಾಖಾನ್ ಎಂಬುವವರು ಕುಣಿಗಲ್ ಬಳಿ ನಿಸಾಮುದ್ದೀನ್ ಅವರ ಬೈಕ್ನಲ್ಲಿ ಹಿಂಬದಿಯಲ್ಲಿ ಕುಳಿತು ಸವಾರಿ ಮಾಡುತ್ತಿದ್ದರು. ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿ ಹೀರೋ ಹೋಂಡಾ ಬೈಕ್ ಹಳ್ಳಕ್ಕೆ ಬಿದ್ದಿತ್ತು. ಈ ವೇಳೆ ತೀವ್ರವಾಗಿ ಗಾಯಗೊಂಡ ಖಾನ್ ಅವರನ್ನು ಬೆಂಗಳೂರಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಾರ್ಚ್ 26, 2011 ರಂದು ಖಾನ್ ಮೃತಪಟ್ಟಿದ್ದರು.
ನಂತರ ಖಾನ್ ಕುಟುಂಬ ಸದಸ್ಯರು ಪರಿಹಾರ ಕೋರಿ ಕೋರ್ಟ್ ಮೊರೆ ಹೋಗಿದ್ದರು. ಅಲ್ಲದೇ, ಖಾನ್ ಚಿಕಿತ್ಸೆ ಮತ್ತು ಇತರ ವೆಚ್ಚಗಳಿಗಾಗಿ 1.2 ಲಕ್ಷ ರೂ.ಖರ್ಚು ಮಾಡಿದ್ದು, ಒಟ್ಟು 15 ಲಕ್ಷ ರೂ.ಪರಿಹಾರ ಕೊಡಿಸುವಂತೆ ಮನವಿ ಮಾಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಕುಣಿಗಲ್ನ ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಮಂಡಳಿ 2017ರ ಆ.24ರಂದು, ವಾರ್ಷಿಕ ಶೇ.6ಬಡ್ಡಿಯೊಂದಿಗೆ 7,27,114 ರೂ.ಗಳನ್ನು ಪರಿಹಾರವಾಗಿ ನೀಡುವಂತೆ ವಿಮಾ ಸಂಸ್ಥೆಗೆ ಆದೇಶಿಸಿತ್ತು.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…