ರಾಜ್ಯ

ಹಿಂಬದಿ ಸವಾರನ ಸಾವಿಗೆ ಬೈಕ್‌ ಮಾಲೀಕನೇ ಪರಿಹಾರ ಪಾವತಿಸಬೇಕು: ಹೈಕೋರ್ಟ್‌

ಬೆಂಗಳೂರು: ಬೈಕ್‌ನ ಹಿಂಬದಿ ಸವಾರನ ಸಾವಿಗೆ ಬೈಕ್ ಮಾಲಕನೇ ಪರಿಹಾರ ಪಾವತಿಸಬೇಕು. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಹಿಂಬದಿ ಸವಾರ ಮೂರನೇ ವ್ಯಕ್ತಿ(ಥರ್ಡ್ ಪಾರ್ಟಿ) ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಹೈಕೋರ್ಟ್‌ ಆದೇಶಿಸಿದೆ.

ಇದೇ ವೇಳೆ ತುಮಕೂರಿನ ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣ ಇನ್ಸೂರೆನ್ಸ್ ಕಂಪೆನಿಗೆ ಪರಿಹಾರ ಪಾವತಿಸಲು ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಅಲ್ಲದೇ, ಜಿ, ನ್ಯಾಯಮಂಡಳಿ ನಿಗದಿಪಡಿಸಿದ ಪರಿಹಾರ ಮೊತ್ತವನ್ನು ಮೃತನ ಕುಟುಂಬಸ್ಥರಿಗೆ ನೀಡುವಂತೆ ವಾಹನದ(ಹೀರೋ ಹೋಂಡಾ ಬೈಕ್) ಮಾಲೀಕ ನಿಸಾಮುದ್ದೀನ್ ಅವರಿಗೆ ಹೈಕೋರ್ಟ್ ಆದೇಶಿಸಿದೆ.

ವಾಹನದ ಆಸನದ ಸಾಮಥ್ಯವು 1+1 ಆಗಿದ್ದು, ಅದರ ಆಧಾರದ ಮೇಲೆ ನ್ಯಾಯಮಂಡಳಿಯು ವಿಮಾ ಕಂಪೆನಿಯ ಮೇಲೆ ಪರಿಹಾರ ನೀಡುವ ಹೊಣೆಗಾರಿಕೆಯನ್ನು ನಿಗದಿಪಡಿಸಿದೆ, ನ್ಯಾಯಾಧಿಕರಣದ ಆದೇಶ ಸೂಕ್ತವಾಗಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಹಾಗೆಯೇ ಪರಿಹಾರ ಪಾವತಿಸುವ ಹೊಣೆಯನ್ನು ಬೈಕ್ ಮಾಲೀಕನಿಗೆ ವರ್ಗಾಯಿಸಿದೆ.

ಪ್ರಕರಣವೇನು?: 2011ರ ಮಾ.24ರಂದು ಮೃತ ಸಿದ್ದಿಕ್ ಉಲ್ಲಾಖಾನ್ ಎಂಬುವವರು ಕುಣಿಗಲ್ ಬಳಿ ನಿಸಾಮುದ್ದೀನ್ ಅವರ ಬೈಕ್‌ನಲ್ಲಿ ಹಿಂಬದಿಯಲ್ಲಿ ಕುಳಿತು ಸವಾರಿ ಮಾಡುತ್ತಿದ್ದರು. ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿ ಹೀರೋ ಹೋಂಡಾ ಬೈಕ್ ಹಳ್ಳಕ್ಕೆ ಬಿದ್ದಿತ್ತು. ಈ ವೇಳೆ ತೀವ್ರವಾಗಿ ಗಾಯಗೊಂಡ ಖಾನ್ ಅವರನ್ನು ಬೆಂಗಳೂರಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಾರ್ಚ್ 26, 2011 ರಂದು ಖಾನ್ ಮೃತಪಟ್ಟಿದ್ದರು.

ನಂತರ ಖಾನ್ ಕುಟುಂಬ ಸದಸ್ಯರು ಪರಿಹಾರ ಕೋರಿ ಕೋರ್ಟ್ ಮೊರೆ ಹೋಗಿದ್ದರು. ಅಲ್ಲದೇ, ಖಾನ್ ಚಿಕಿತ್ಸೆ ಮತ್ತು ಇತರ ವೆಚ್ಚಗಳಿಗಾಗಿ 1.2 ಲಕ್ಷ ರೂ.ಖರ್ಚು ಮಾಡಿದ್ದು, ಒಟ್ಟು 15 ಲಕ್ಷ ರೂ.ಪರಿಹಾರ ಕೊಡಿಸುವಂತೆ ಮನವಿ ಮಾಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಕುಣಿಗಲ್‌ನ ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಮಂಡಳಿ 2017ರ ಆ.24ರಂದು, ವಾರ್ಷಿಕ ಶೇ.6ಬಡ್ಡಿಯೊಂದಿಗೆ 7,27,114 ರೂ.ಗಳನ್ನು ಪರಿಹಾರವಾಗಿ ನೀಡುವಂತೆ ವಿಮಾ ಸಂಸ್ಥೆಗೆ ಆದೇಶಿಸಿತ್ತು.

andolanait

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

2 hours ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

2 hours ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

2 hours ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

2 hours ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

2 hours ago