ಬೆಂಗಳೂರು: ಬೈಕ್ನ ಹಿಂಬದಿ ಸವಾರನ ಸಾವಿಗೆ ಬೈಕ್ ಮಾಲಕನೇ ಪರಿಹಾರ ಪಾವತಿಸಬೇಕು. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಹಿಂಬದಿ ಸವಾರ ಮೂರನೇ ವ್ಯಕ್ತಿ(ಥರ್ಡ್ ಪಾರ್ಟಿ) ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
ಇದೇ ವೇಳೆ ತುಮಕೂರಿನ ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣ ಇನ್ಸೂರೆನ್ಸ್ ಕಂಪೆನಿಗೆ ಪರಿಹಾರ ಪಾವತಿಸಲು ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಅಲ್ಲದೇ, ಜಿ, ನ್ಯಾಯಮಂಡಳಿ ನಿಗದಿಪಡಿಸಿದ ಪರಿಹಾರ ಮೊತ್ತವನ್ನು ಮೃತನ ಕುಟುಂಬಸ್ಥರಿಗೆ ನೀಡುವಂತೆ ವಾಹನದ(ಹೀರೋ ಹೋಂಡಾ ಬೈಕ್) ಮಾಲೀಕ ನಿಸಾಮುದ್ದೀನ್ ಅವರಿಗೆ ಹೈಕೋರ್ಟ್ ಆದೇಶಿಸಿದೆ.
ವಾಹನದ ಆಸನದ ಸಾಮಥ್ಯವು 1+1 ಆಗಿದ್ದು, ಅದರ ಆಧಾರದ ಮೇಲೆ ನ್ಯಾಯಮಂಡಳಿಯು ವಿಮಾ ಕಂಪೆನಿಯ ಮೇಲೆ ಪರಿಹಾರ ನೀಡುವ ಹೊಣೆಗಾರಿಕೆಯನ್ನು ನಿಗದಿಪಡಿಸಿದೆ, ನ್ಯಾಯಾಧಿಕರಣದ ಆದೇಶ ಸೂಕ್ತವಾಗಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಹಾಗೆಯೇ ಪರಿಹಾರ ಪಾವತಿಸುವ ಹೊಣೆಯನ್ನು ಬೈಕ್ ಮಾಲೀಕನಿಗೆ ವರ್ಗಾಯಿಸಿದೆ.
ಪ್ರಕರಣವೇನು?: 2011ರ ಮಾ.24ರಂದು ಮೃತ ಸಿದ್ದಿಕ್ ಉಲ್ಲಾಖಾನ್ ಎಂಬುವವರು ಕುಣಿಗಲ್ ಬಳಿ ನಿಸಾಮುದ್ದೀನ್ ಅವರ ಬೈಕ್ನಲ್ಲಿ ಹಿಂಬದಿಯಲ್ಲಿ ಕುಳಿತು ಸವಾರಿ ಮಾಡುತ್ತಿದ್ದರು. ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿ ಹೀರೋ ಹೋಂಡಾ ಬೈಕ್ ಹಳ್ಳಕ್ಕೆ ಬಿದ್ದಿತ್ತು. ಈ ವೇಳೆ ತೀವ್ರವಾಗಿ ಗಾಯಗೊಂಡ ಖಾನ್ ಅವರನ್ನು ಬೆಂಗಳೂರಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಾರ್ಚ್ 26, 2011 ರಂದು ಖಾನ್ ಮೃತಪಟ್ಟಿದ್ದರು.
ನಂತರ ಖಾನ್ ಕುಟುಂಬ ಸದಸ್ಯರು ಪರಿಹಾರ ಕೋರಿ ಕೋರ್ಟ್ ಮೊರೆ ಹೋಗಿದ್ದರು. ಅಲ್ಲದೇ, ಖಾನ್ ಚಿಕಿತ್ಸೆ ಮತ್ತು ಇತರ ವೆಚ್ಚಗಳಿಗಾಗಿ 1.2 ಲಕ್ಷ ರೂ.ಖರ್ಚು ಮಾಡಿದ್ದು, ಒಟ್ಟು 15 ಲಕ್ಷ ರೂ.ಪರಿಹಾರ ಕೊಡಿಸುವಂತೆ ಮನವಿ ಮಾಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಕುಣಿಗಲ್ನ ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಮಂಡಳಿ 2017ರ ಆ.24ರಂದು, ವಾರ್ಷಿಕ ಶೇ.6ಬಡ್ಡಿಯೊಂದಿಗೆ 7,27,114 ರೂ.ಗಳನ್ನು ಪರಿಹಾರವಾಗಿ ನೀಡುವಂತೆ ವಿಮಾ ಸಂಸ್ಥೆಗೆ ಆದೇಶಿಸಿತ್ತು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…